Political News:
Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದ್ರು. ಈ ವೇಳೆ ದೊಡ್ಡಬಳ್ಳಾಪುರದ ಬಿಜೆಪಿ ನಾಯಕ, ಟಿಕೆಟ್ ಆಕಾಂಕ್ಷಿಯಾಗಿರೋ ಧೀರಜ್ ಮುನಿರಾಜು ಉಪಸ್ಥಿತರಿದ್ರು.
ಮುಂಬರುವ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ ಆಡಳಿತಾರೂಢ ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಚುನಾವಣೆಗೆ ಯಾವ ರೀತಿಯಾಗಿ ಪಕ್ಷವನ್ನಸಜ್ಜುಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಹಾಗೂ ಚುನಾವಣಾ ತಂತ್ರಗಾರಿಕೆಯನ್ನ ನಡೆಸಿದ್ದಾರೆ.
ಗುರುವಾರ ಬೆಂಗಳೂರಿಗೆ ಬಂದ ಬಿಜೆಪಿ ಉಸ್ತುವಾರಿ ನಾಯಕರು, ಚುನಾವಣೆ ಗೆಲ್ಲಲು ಪ್ಲಾನ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ಬಿಜೆಪಿ ಹಿರಿಯರು ನಾಯಕರ ಜೊತೆ ದೊಡ್ಡಬಳ್ಳಾಪುರದ ಬಿಜೆಪಿ ನಾಯಕ, ಟಿಕೆಟ್ ಆಕಾಂಕ್ಷಿಯಾಗಿರೋ ಧೀರಜ್ ಮುನಿರಾಜು ಸ್ವಾಗತಿಸಿದ್ರು.
ಈ ವೇಳೆ ಮಾತ್ನಾಡಿದ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರದಾನ್, ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಬಜೆಟ್ ಅಧಿವೇಶನದ ಬಳಿಕ ರಾಜ್ಯದ ನಾಲ್ಕು ಭಾಗದಲ್ಲಿ ರಥಯಾತ್ರೆಯ ರೂಪರೇಷೆ ಹಾಗೂ ಚುನಾವಣಾ ತಂತ್ರಗಾರಿಗೆ ಸೇರಿದಂತೆ ಬೃಹತ್ ಸಮಾವೇಶ ಹಾಗೂ ಚುನಾವಣೆಯ ತಂತ್ರಗಾರಿಗೆಗೆ ಬಿಜೆಪಿ ನಾಯಕರು ಸಜ್ಜುಗೊಂಡಿದ್ದಾರೆ.
ಇನ್ನು ದೊಡ್ಡಬಳ್ಳಾಪುರದಲ್ಲೂ ರಥಯಾತ್ರೆ ನಡೆಸಲು ಪ್ಲಾನ್ ಮಾಡಲಾಗಿದ್ದು, ದೊಡ್ಡಬಳ್ಳಾಪುರ ರಥಯಾತ್ರೆ ಹೊಣೆ ಧೀರಜ್ ಮುನಿರಾಜುಗೆ ನೀಡಲಿದ್ದಾರೆ. ಯುವಕರಿಗೆ ಟಿಕೆಟ್ ನೀಡೋ ನಿಟ್ಟಿನಲ್ಲಿ, ದೊಡ್ಡಬಳ್ಳಾಪುರದಿಂದ ಧೀರಜ್ ಮುನಿರಾಜುಗೆ ಬಿಜೆಪಿ ಟಿಕೆಟ್ ನೀಡೋದು ಫಿಕ್ಸ್ ಆಗಿದೆ. ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳ ಜೊತೆ, ದೊಡ್ಡಬಳ್ಳಾಪುರದಲ್ಲಿ ರಥಯಾತ್ರೆ ನಡೆಸಲು ಪ್ಲಾನ್ ಮಾಡಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರದಲ್ಲಿ ರಥಯಾತ್ರೆ ನಡೆಯಲಿದ್ದು, ಅಮಿತ್ ಶಾ ಮುಖ್ಯ ಅಥಿತಿಯಾಗಿ ಭಾಗಿಯಾಲಿದ್ದಾರೆ ಎನ್ನಲಾಗಿದೆ.
ಒಟ್ನಲ್ಲಿ, ರಾಜ್ಯದಲ್ಲಿ ಬಿಜೆಪಿ ಅರಳಿಸೋಕೆ ನಾಯಕರು ಕಸರತ್ತು ಮಾಡ್ತಿದ್ರೆ, ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯಿಂದ ಧೀರಜ್ ಮುನಿರಾಜು ಟಿಕೆಟ್ ನೀಡಿ, ಗೆಲ್ಲಿಸೋಕೆ ತಂತ್ರಗಾರಿಕೆಯೂ ನಡೆದಿದೆ..
ಪೊಲಿಟಿಕಲ್ ಬ್ಯರೋ, ಕರ್ನಾಟಕ ಟಿವಿ, ದೊಡ್ಡಬಳ್ಳಾಪುರ..
ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ನೀಡಿದ್ರು ಭರ್ಜರಿ ಗಿಫ್ಟ್…!