Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವೇ ಸಿದ್ಧಪಡಿಸಿದ ಜಾತಿಗಣತಿ ವರದಿಯನ್ನು ನಿಮ್ಮ ಹೈಕಮಾಂಡ್ ಕಸದ ಬುಟ್ಟಿಗೆ ಏಸೆಯುವ ಮೂಲಕ, ಈ ವರದಿಯ ಅಂಕಿ- ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂಬುದನ್ನು ಒಪ್ಪಿಕೊಂಡತಾಗಿದೆ. ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಜಾತಿಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಲಾಭ ಪಡೆಯಲು ಮಾಡಿದ ನಾಟಕಕ್ಕೆ ನಿಮ್ಮ ಹೈಕಮಾಂಡ್ ತಕ್ಕ ಶಾಸ್ತಿ ಮಾಡಿದೆ. ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ ? ₹150 ಕೋಟಿ ರೂ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ? ಎಂದು ನಿಖಿಲ್ ಪ್ರಶ್ನಿಸಿದ್ದಾರೆ.