Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.
ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು ತೋರಿಸಿಕೊಟ್ಟರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತವಾದ ಛಾಪನ್ನು ಮೂಡಿಸಿವೆ. ಇಂದಿಗೂ ಅವರ ಜೀವನವು ಅಸಂಖ್ಯಾತ ಜನರಿಗೆ ನಿಸ್ವಾರ್ಥ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತಿದೆ ಹಾಗೂ ಪ್ರೇರಣೆಯಾಗಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ ಮತ್ತು ಅಚಲ ಸೇವೆಯ ಸಂಕೇತವಾಗಿ ಅವರು ಜನರ ಸ್ಮೃತಿಯಲ್ಲಿ ನೆಲೆಸಿದ್ದಾರೆ. ಇತರರ ಏಳಿಗೆಗಾಗಿ ಮುಡಿಪಾಗಿಟ್ಟ ಜೀವನದ ಮೂಲಕ, ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಅವರು… pic.twitter.com/WsPsBTD6Ne
— Narendra Modi Kannada (@Namoinkannada) April 1, 2026




