Friday, June 20, 2025

Latest Posts

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

- Advertisement -

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು..

ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡರೆ ಸುಮ್ಮನಿರುವ ಜಾಯಮಾನ ನನ್ನದಲ್ಲ, ಅಭಿವೃದ್ಧಿಗೆ ಎಂದು ಸರ್ಕಾರದಿಂದ ಬಂದಂತಹ ಅನುದಾನದ ಹಣ ವಾಪಾಸ್ ಹೋದರೆ ನೀವೇ ಹೊಣೆಗಾರರಾಗುತ್ತೀರಿ ಎಂದು ತ್ರೈಮಾಸಿಕ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಖಡಕ್ ಸೂಚನೆ ಕೊಟ್ಟರು.

 ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಇಲ್ಲವಾದಲ್ಲಿ ನಿಮ್ಮ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು..

ಕೆರೆಗಳಿಗೆ ನೀರು ತುಂಬಿಸುವ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು ಸೆಪ್ಟೆಂಬರ್ ಒಂದರಿಂದ ಉಳಿದ ಕೆರೆಗಳಿಗೆ ನೀರು ತುಂಬಿಸಲು ಕಾರ್ಯ ಯೋಜನೆ ರೂಪಿಸಲಾಗಿದೆ ಇದರಂತೆ ನೀರು ಹರಿಸಲು ಅಧಿಕಾರಿಗಳು ಮುತುವರ್ಜಿವಹಿಸಬೇಕು ಎಂದು ಸೂಚನೆ ನೀಡಿದರು.. ಸರ್ಕಾರದ ಆದೇಶದಂತೆ ಗಾಂಧಿಗ್ರಾಮ ಏತ ನೀರಾವರಿ ಯೋಜನೆಯಡಿ ಮಳವಳ್ಳಿ ಕೆರೆ ತುಂಬಿದ ನಂತರ ನಲ್ಲೂರು ಅಮ್ಮಾನಿ ಕೆರೆಗೆ ನೀರು ತುಂಬಿಸಲು ಕಾರ್ಯ ಯೋಜನೆ ರೂಪಿಸಿ ಕಾರ್ಯಗತಕ್ಕೆ ತನ್ನಿ ಎಂದು ಸೂಚನೆ ನೀಡಿದರು..

ಎಂಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮವನ್ನು ನಡೆಸಿ ಚೆಕ್ ವಿತರಣೆ ಮಾಡಿದ ಬಳಿಕ 15 ದಿನಗಳು ಕಳೆದರೂ ಸಹ ಫಲಾನುಭವಿ ರೈತರ ಖಾತೆಗೆ ಹಣ ಜಮಾವಣೆ ಆಗಿಲ್ಲ ಏನು ಕಾರಣ ಎಂದು ಶಾಖಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು…

ಸಭೆಯಲ್ಲಿ ತಹಸೀಲ್ದಾರ್ ಎಂ.ರವಿಶಂಕರ್, ಇಓ ಶ್ರೀಕಂಠ ರಾಜೇ ಅರಸ್, ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಮಿಲನ ಮರಕೊಡ, ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

ಪ್ರಸಾದ್ ಕರ್ನಾಟಕ ಟಿವಿ  ಗುಂಡ್ಲುಪೇಟೆ

- Advertisement -

Latest Posts

Don't Miss