Tuesday, June 3, 2025

Latest Posts

siddaramaiah :ನಾಯಕತ್ವ ಬದಲಾವಣೆಗೆ ‘ಕೈ’ಕಮಾಂಡ್​ ಕಸರತ್ತು.. ಹೈಕೋರ್ಟ್​ ಆದೇಶದ ಮಲೆ ಸಿದ್ದರಾಮಯ್ಯ ಭವಿಷ್ಯ?

- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್​ ಹೈಕಮಾಂಡ್​ ಕಸರತ್ತು ನಡೆಸುತ್ತಿದ್ದು, ಹೈಕೋರ್ಟ್​ ತೀರ್ಪಿನ ಮೇಲೆ ಸಿಎಂ ಸಿದ್ದರಾಮಯ್ಯ ಕುರ್ಚಿ ಭವಿಷ್ಯ ನಿಂತಿದೆ ಎಂದು ಹೇಳಲಾಗುತ್ತಿದೆ.

ಮುಡಾ ಹಗರಣ ಸಂಬಂಧ ಆಗಸ್ಟ್ 29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ಒಂದ್ವೇಳೆ ನ್ಯಾಯಾಲಯದ ಆದೇಶ ಸಿಎಂ ಸಿದ್ದರಾಮಯ್ಯ ವಿರುದ್ಧ ಬಂದಿದ್ದೇ ಆದಲ್ಲಿ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ತಿಳಿಸಿವೆ. ಹೈಕೋರ್ಟ್​ ಆದೇಶ ಸಿದ್ದರಾಮಯ್ಯ ವಿರುದ್ಧ ಬಂದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸೂಚಿಸಲು ಕಾಂಗ್ರೆಸ್​ ಹೈಕಮಾಂಡ್​ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

 

ಅಲ್ಲದೆ, ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ನಿರ್ಧಾರವನ್ನು ಕೈಗೊಳ್ಳದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮಧ್ಯೆ ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಎಚ್ಚರಿಕೆಯ ಹೆಜ್ಜೆಯನ್ನಿಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಇವೆಲ್ಲದರ ನಡುವೆ ತಮ್ಮ ಎದುರಾಳಿಗಳ ತಂತ್ರವನ್ನ ವಿಫಲಗೊಳಿಸಲು ಸಿಎಂ ಸಿದ್ದರಾಮಯ್ಯ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ. ಹಿಂದುಳಿದ ವರ್ಗಗಳು ಮತ್ತು SC/ST ಸಮುದಾಯಗಳ ಬೆಂಬಲ ಪಡಯಲು ಸಿದ್ದರಾಮಯ್ಯ ರಣತಂತ್ರ ರೂಪಿಸುತ್ತಿದ್ದಾರೆ. ಈ ಮಧ್ಯೆ, ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಕುರುಬ ಸಮುದಾಯದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಮಠಾಧೀಶರ ತಂಡ ಸಿಎಂ ಪರ ಶಕ್ತಿ ಪ್ರದರ್ಶನ ಮಾಡಿತ್ತು.

 

ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಶೋಷಿತ ಸಮುದಾಯಗಳ ಒಕ್ಕೂಟ ಆಗಸ್ಟ್​ 27ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಸಚಿವ ಸತೀಶ್​ ಜಾರಕಿಹೊಳಿ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಲಿರುವ ಶೋಷಿತ ಸಮುದಾಯಗಳ ಒಕ್ಕೂಟ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬೃಹತ್​ ಪ್ರತಿಭಟನೆ ನಡೆಸಲಿದೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ದಾವಣಗೆರೆಯಲ್ಲಿ ನಡೆದಿದ್ದ ಸಿದ್ದರಾಮೋತ್ಸವ ಕಾರ್ಯಕ್ರಮದಂತೆಯೇ ನಾಳಿನ ಬೃಹತ್ ಹೋರಾಟವನ್ನು ಸಹ ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಲು ಅಹಿಂದ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ನಾಯಕರು ತಂತ್ರ ರೂಪಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಪರ ಕಾಂಗ್ರೆಸ್​ ಹೈಕಮಾಂಡ್​​ಗೆ ಎಚ್ಚರಿಕೆ ಸಂದೇಶ ರವಾನಿಸಲು ಅಹಿಂದ ನಾಯಕರು ಮಾಸ್ಟರ್​ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest Posts

Don't Miss