ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha) ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ. ನಂತರ ಈ ಘಟನೆಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಹಿಜಬ್ ವಿವಾದದಿಂದ ರಾಜ್ಯದಲ್ಲಿ ಭಯೋತ್ಪಾದಕ ವಾತಾವರಣ ಉಂಟಾಗುತ್ತಿದೆ, ಆದ್ದರಿಂದ ಎಸ್ ಡಿ ಪಿ ಐ (SDPI) ಹಾಗೂ ಪಿಎಫ್ಐ (PFI) ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ (central government)ಒತ್ತಾಯಿಸುವಂತೆ ತಿಳಿಸಿದ್ದಾರೆ. ಇದಕ್ಕೆ ಸಿಎಂ ಬೊಮ್ಮಾಯಿ ಪರಿಶೀಲನೆಯ ನಂತರ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಮಾಧ್ಯಮಗಳೊಂದಿಗೆ ಮಾತನಾಡಿದರು.