Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ.
ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭಾಗವಹಿಸಲಿದ್ದಾರೆ. ಅಲ್ಲದೇ ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.
ಶಾಸಕ ನಂಜೇಗೌಡ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದ್ದು, ಸುಮಾರು 50000 ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಮಾಲೂರು ಶಾಸಕ ಕೆವೈ ನಂಜೇಗೌಡ, ಮಾಲೂರಿನಲ್ಲಿ ನಡೆಯಲಿರುವ ಪ್ರಜಾಧ್ವನಿ 2 ಯಾತ್ರೆ ಕಾರ್ಯಕ್ರಮ. ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರ ಮತಯಾಚನೆ ಮಾಡಲಿದ್ದಾರೆ.
ಸಂಸದ ಮುನಿಸ್ವಾಮಿ ಅವರು ಆಕಸ್ಮಿಕವಾಗಿ, ಸಂಸದ ಸ್ಥಾನದ ಬಗ್ಗೆ ಅರಿವು ಇಲ್ಲದೆ ಎಂಪಿ ಆದವರು. ಸಂಸದ ಮುನಿಸ್ವಾಮಿ ಅವರ ಇತಿಹಾಸ ಏನು? ನಾಳೆ ಕೆಹೆಚ್ ಮುನಿಯಪ್ಪ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕಳೆದ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ನಮಗೆ ಒಂದೇ ಸ್ಥಾನ ಬಂದಿದ್ದು. ಈಗ ಬಿಜೆಪಿ – ಜೆಡಿಎಸ್ ಮೈತ್ರಿಯಾಗಿದ್ದು ಅವರಿಗೂ ಒಂದೇ ಸ್ಥಾನ ಬರುತ್ತೆ. ಜಾತ್ಯಾತೀತ ಜನತಾದಳ ಹೋಗಿ ಕೋಮುವಾದ ಜನತಾದಳ ಆಗಿದೆ. ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯಾತೀತವಾಗಿದೆ. ಕೋಮುವಾದಿ ಬಿಜೆಪಿ ಜೊತೆ ಜೆಡಿಎಸ್ ಸಹ ಕೋಮುವಾದಿಯಾಗಿದೆ. ನಮಗೆ ಯಾರಿಗೂ ಟಾರ್ಗೆಟ್ ಕೊಟ್ಟಿಲ, ಆದ್ರೆ ಗೆಲ್ಲಿಸಿಕೊಂಡು ಬರಬೇಕು ಅಂತ ಜವಾಬ್ದಾರಿ ಇದೆ ಎಂದು ನಂಜೇಗೌಡ ಹೇಳಿದ್ದಾರೆ.
ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್
ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ