Saturday, July 27, 2024

Latest Posts

ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ನಮ್ಮೊಂದಿಗಿದ್ದು ಕ್ಯಾಂಪೇನ್ ಮಾಡುತ್ತಾರೆ: ಪ್ರಜ್ವಲ್ ರೇವಣ್ಣ

- Advertisement -

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ಲೋಕಸಭಾ ಚುನಾವಣೆ ಉಸ್ತುವಾರಿ ಆಗಿರುವ ರಾದಾಮೋಹನ್‌ ದಾಸ್ ಅವರು ಹಾಸನಕ್ಕೆ ಬಂದಿದ್ದಾರೆ. ಬಿಜೆಪಿ ಮುಖಂಡರು, ಶಾಸಕರನ್ನು ಕರೆ ಸಭೆ ಮಾಡಿದ್ದಾರೆ. ಒಂದೊಂದೆ ತಾಲ್ಲೂಕಿನ ಬಗ್ಗೆ ಮಾಹಿತಿ ಪಡೆದು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟನ್ನು ಮೂಡಿಸಿದ್ದಾರೆ. ನಮ್ಮ ಮುಖ್ಯವಾದ ಗುರಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕು. 400 ಕ್ಕೂ ಹೆಚ್ಚು ಸೀಟ್ ಗೆಲ್ಲಿಸುವ ಮೂಲಕ ಪ್ರಧಾನಿ ಮಾಡಬೇಕು ಎಂದಿದ್ದಾರೆ.

ಅದರಲ್ಲಿ ಹಾಸನದ ಎನ್‌ಡಿಎ ಅಭ್ಯರ್ಥಿಯಾದ ನಿಮ್ಮನ್ನು ದೆಹಲಿಗೆ ಕರೆದುಕೊಂಡು ಹೋಗಬೇಕು ಎಂದು ಸಭೆ ಮಾಡಿದ್ದಾರೆ. ಬಹಳ ಸಂತೋಷವಾಗಿದೆ, ಎಲ್ಲಾ ಒಗ್ಗಟ್ಟಾಗಿ ಹೋಗುವ ನಿರ್ಧಾರ ಮಾಡಿದ್ದೇವೆ. ಪ್ರೀತಂಗೌಡ ಜಿ ಸರ್ ಅವರಿಗೆ ಮೈಸೂರು ಉಸ್ತುವಾರಿ ಕೊಟ್ಟಿದ್ದಾರೆ. ಅಲ್ಲಿಯೂ ಸ್ವಲ್ಪ ಟೆಕ್ನಿಕಲ್ ಇಶ್ಯೂ ಇದೆ, ಅದಕ್ಕಾಗಿ ಅಲ್ಲಿಗೆ ಹೋಗಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಕ್ಯಾಂಪೇನ್‌ನಲ್ಲಿ ನಮ್ಮ ಜೊತೆನೆ ಇದ್ದು ಒಗ್ಗಟ್ಟಾಗಿ ಹೋಗುವ ಕೆಲಸ ಮಾಡ್ತಿವಿ.

ಅದನ್ನು ರಾಧಾ ಮೋಹನ್ ದಾಸ್ ಜಿ ಮಾತನಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಗ್ಗಟ್ಟಾಗಿ ಹೋಗಿ ಕೆಲಸ ಮಾಡ್ತೇವೆ. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಚಿವ ಕೆ‌.ಎನ್.ರಾಜಣ್ಣ ಲಘುವಾಗಿ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಪ್ರಜ್ವಲ್,  ಇವತ್ತು ಜಿಲ್ಲೆಯ ಜನ ಅಲ್ಲ, ರಾಜ್ಯದ ಜನ ನೋಡ್ತಿದ್ದಾರೆ. ಅವರು ಒಬ್ಬ ಮುತ್ಸದ್ದಿ ರಾಜಕಾರಣಿ, ಕರ್ನಾಟಕದ ಆಸ್ತಿ. ಅಂತಹವರ ಬಗ್ಗೆ ಪದೇ ಪದೇ ಸಾವಿನ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಅವರಿಗೆ ಸರಿಯಾದ ಉತ್ತರವನ್ನು ಜನರು ಜೂ.4 ರಂದು ಕೊಡ್ತಾರೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..

ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

- Advertisement -

Latest Posts

Don't Miss