National News : ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ, ಹಿರಿಯ ಕಾಂಗ್ರೆಸ್ ನಾಯಕರು, ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್, ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ದೂರು ನೀಡಿರುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ.
ಶುಕ್ರವಾರದಂದು ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ, ಮಧ್ಯಪ್ರದೇಶದ ಗುತ್ತಿಗೆದಾರರ ಒಕ್ಕೂಟ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಅವರು 50% ಕಮಿಷನ್ ಪಾವತಿಸಿದ ನಂತರವೇ ಪಾವತಿಯನ್ನು ಸ್ವೀಕರಿಸುತ್ತಾರೆ ಎಂದು ದೂರಿದ್ದರು ಎನ್ನಲಾಗಿದೆ.
ಕರ್ನಾಟಕದ ಜನರು 40% ಕಮಿಷನ್ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ಈಗ ಮಧ್ಯಪ್ರದೇಶದ ಜನರು 50% ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ ಎಂದು ಬರೆದಿದ್ದರು ಎನ್ನಲಾಗಿದೆ. ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪೋಸ್ಟ್ ಮಾಡಿರುವ ವಿಚಾರವಾಗಿ ಸಂಸದ ನರೋತ್ತಮ್ ಮಿಶ್ರಾ, ಈ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಈ ಆರೋಪಗಳಿಗೆ ಸಾಕ್ಷಿಗಳನ್ನು ನೀಡಿ, ಇಲ್ಲದೇ ಹೋದರೆ ಸೂಕ್ತ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಬಿಜೆಪಿಯ ಮುಂದೆ ಆಯ್ಕೆಗಳಿವೆ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
Instagramನಲ್ಲಿ ಹವಾ ಮೆಂಟೇನ್ ಮಾಡಿದ ಕೊಹ್ಲಿ: ಒಂದು ಪೋಸ್ಟ್ಗೆ ಕೋಟಿ ಕೋಟಿ ಹಣ..
ಸಂಸತ್ನಲ್ಲಿ ರಾಹುಲ್ ಗಾಂಧಿ ಕೊಟ್ಟ ಫ್ಲೈಯಿಂಗ್ ಕಿಸ್ಗೆ ಸ್ಮೃತಿ ಇರಾನಿ ಆಕ್ಷೇಪ: ಸ್ಪೀಕರ್ಗೆ ದೂರು

