ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ.
6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ ವಿಚಾರವಾಗಿ ಮಾತನಾಡಿದ್ರು. ಕರೊನಾ ಮಹಾಮಾರಿ ದೇಶಕ್ಕೆ ಕಾಲಿಡ್ತಾ ಇದ್ದಂತೆ ಕೇಂದ್ರ ಸರ್ಕಾರ ಆನೆಯ ದಂತದಂತೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿತು. ಆದರೆ ಈಗ ದೇಶದ ಆರ್ಥಿಕತೆಯನ್ನ ಒಮ್ಮೆ ನೋಡಿ, ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಯನ್ನ ದಿವಾಳಿ ಮಾಡಿದೆ ಅಂತಾ ಕಿಡಿಕಾರಿದ್ದಾರೆ.

ಸುಶಾಂತ್ ಸಿಂಗ್ ಕೇಸ್ಗೆ ಬಿಗ್ ಟ್ವಿಸ್ಟ್..!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಾ ಇದೆ. ಇದೀಗ ಸುಶಾಂತ್ ಹಾಗೂ ಸಹೋದರಿ ಮಾಡಿರುವ ವಾಟ್ಸಾಪ್ ಸಂದೇಶವೊಂದು ಲಭ್ಯವಾಗಿದ್ದು ಪ್ರಕರಣದ ದಿಕ್ಕನ್ನೇ ಬದಲಿಸಿದೆ.
ಸುಶಾಂತ್ ಸಾವಿನ ಬಳಿಕ ಪಾಟ್ನಾ ಠಾಣೆಯಲ್ಲಿ ಕೇಸ್ ದಾಖಲಿಸಿದ್ದ ನಟನ ತಂದೆ ತಮ್ಮ ಪುತ್ರ ಮಾನಸಿಕವಾಗಿ ಬಲಹೀನರಾಗಿದ್ರು ಅನ್ನೋ ವಿಚಾರ ತಮಗೆ ಗೊತ್ತೇ ಇರಲಿಲ್ಲ ಅಂತಾ ಹೇಳಿಕೆ ನೀಡಿದ್ದರು. ಆದರೆ ಇದೀಗ ಲಭ್ಯವಾಗಿರೋ ಸುಶಾಂತ್ ಹಾಗೂ ಸಹೋದರಿ ಶ್ವೇತಾ ಚಾಟ್ನಲ್ಲಿ ವೈದ್ಯರ ಸಲಹೆ ಪಡೆಯದೇ ಸುಶಾಂತ್ ಔಷಧಿ ಸೇವಿಸ್ತಾ ಇದ್ರು ಅನ್ನೋ ವಿಚಾರ ಬಹಿರಂಗವಾಗಿದೆ, ಈ ಮೂಲಕ ಸುಶಾಂತ್ ಕುಟುಂಬಕ್ಕೂ ಅವರ ಮಾನಸಿಕ ಸ್ಥಿತಿ ಬಗ್ಗೆ ಮಾಹಿತಿ ಇತ್ತು ಅನ್ನೋ ಅಂಶ ಮೇಲ್ನೋಟಕ್ಕೆ ದೃಢಪಟ್ಟಿದೆ.
ಪ್ರಣಬ್ ಮುಖರ್ಜಿ ವಿಧಿವಶ; ಗಣ್ಯಾತಿಗಣ್ಯರಿಂದ ಅಂತಿಮ ನಮನ
ಕರೊನಾ ಮಹಾಮಾರಿಯಿಂದಾಗಿ ಸೋಮವಾರ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಂತ್ಯಕ್ರಿಯೆ ಇನ್ನೇನು ಕೆಲವೇ ಗಂಟೆಗಳಲ್ಲಿ ನೆರವೇರಲಿದೆ. ದೆಹಲಿಯ ಲೋಧಿ ರಸ್ತೆಯಲ್ಲಿ ಅಂತ್ಯಕ್ರಿಯೆಗೆ ಸಕಲ ವ್ಯವಸ್ಥೆ ಮಾಡಲಾಗ್ತಿದೆ. ಸದ್ಯ ರಾಜಾಜಿ ಮಾರ್ಗದಲ್ಲಿರೋ ಪ್ರಣಬ್ ನಿವಾಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಪ್ರಧಾನಿ ಮೋದಿ, ಜೋತಿರಾದಿತ್ಯ ಸಿಂಧಿಯಾ, ಬಿಪಿನ್ ರಾವತ್ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಸಚಿವೆ ಶಶಿಕಲಾ ಜೊಲ್ಲೆಗೆ ಕರೊನಾ ದೃಢ..!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕರೊನಾ ಸೋಂಕು ದೃಢಪಟ್ಟಿದೆ. ಶಶಿಕಲಾ ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವೆ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಅವರಿಗೂ ಕೋವಿಡ್ ಇರೋದು ದೃಢಪಟ್ಟಿದೆ. ಇನ್ನು ಈ ಸಂಬಂಧ ಮಾಹಿತಿ ನೀಡಿರುವ ಸಚಿವೆ, ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ, ನನ್ನ ಪ್ರಾಥಮಿಕ ಸಂಪರ್ಕಿತರು ಪರೀಕ್ಷೆಗೆ ಒಳಗಾಗಿ ಎಂದು ತಿಳಿಸಿದ್ದಾರೆ.
ಲಾಕ್ಡೌನ್ 4.0; ಕೆ,ಆರ್ ಮಾರ್ಕೆಟ್ ಸಹಜ ಸ್ಥಿತಿಯತ್ತ
ಕರೊನಾ ಹಿನ್ನೆಲೆ ಕಳೆದ 5 ತಿಂಗಳಿನಿಂದ ಸ್ತಬ್ಧವಾಗಿದ್ದ ಕೆ.ಆರ್ ಮಾರ್ಕೆಟ್ ಹಾಗೂ ಕಲಾಸಿಪಾಳ್ಯ ಮಾರ್ಕೆಟ್ನಲ್ಲಿ ವ್ಯಾಪಾರ – ವ್ಯವಹಾರ ಭರದಿಂದ ಸಾಗಿದೆ. ವ್ಯಾಪಾರ – ವ್ಯವಹಾರಕ್ಕೆ ಬಿಬಿಎಂಪಿ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಮಾರುಕಟ್ಟೆ ಸ್ವಚ್ಚಗೊಳಿಸಲಾಗಿತ್ತು. ತಡರಾತ್ರಿಯಿಂದಲೇ ರಾಜಧಾನಿಯ ಸುತ್ತಮುತ್ತಲ ಭಾಗದಿಂದ ಆಗಮಿಸಿದ ವ್ಯಾಪಾರಸ್ಥರು ಉತ್ಸಾಹದಿಂದ ವಹಿವಾಟು ನಡೆಸಿದ್ರು. ಇನ್ನು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಾರುಕಟ್ಟೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.