ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಪಕ, ಖ್ಯಾತ ನಟ, ಖಳ ನಟ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಮಂಜುಳಾ ಶಂಕರ್ ಅವರು ಹೃದಯಘಾತದಿಂದ ವಿಧಿವಶರಾಗಿದ್ದಾರೆ.
ಮಂಜುಳಾ ಶಂಕರ್ ಅವರು ಸಕ್ರೀಯ ನಿರ್ಮಾಪಕರಾಗಿದ್ದು, ಇವರು ಶರಣ್ ಅಭಿನಯದ 2014 ರಲ್ಲಿ ತೆರೆಕಂಡ ‘ಜಯಲಲಿತಾ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಇತ್ತೀಚೆಗಷ್ಟೇ ಮಂಜುಳಾ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತು. ಹಾಗಾಗಿ ಅವರಿಗೆ ಅಂಜಿಯೋಗ್ರಾಮ್ ಮಾಡಿಸಲಾಗಿತ್ತು. ನಂತರ ಬೈಪಾಸ್ ಸರ್ಜರಿಯನ್ನೂ ಕೂಡ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ವಿಧಿವಶರಾಗಿದ್ದಾರೆ.
ಕನ್ನಡ ಚಿತ್ರರಂಗದ ಗಣ್ಯರು, ಆಪ್ತರು ಮತ್ತು ಬಂಧು-ಮಿತ್ರರು ಮಂಜುಳಾ ಶಂಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇನ್ನು ಮಂಗಳವಾರ ಸಂಜೆ ಮಂಜುಳಾ ಅವರ ಅಂತ್ಯಕ್ರಿಯೆಯನ್ನು ವಿದ್ಯಾರಣ್ಯಪುರಂನ ಬಡಾವಣೆಯ ವೀರಶೈವ ರುದ್ರಭೂಮಿಯಲ್ಲಿ ನಡೆಸಲಾಗಿದೆ ಎಂಬ ವರದಿ ಕೇಳಿ ಬಂದಿದೆ.
ಪ್ರಕೃತಿ ಪ್ರಭಾಕರ್, ಕರ್ನಾಟಕ ಟಿವಿ, ಸಿನಿಮಾ ಬ್ಯುರೋ