Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ ರವರ ವಿರುದ್ಧ ಘೋಷಣೆಯನ್ನು ಕೂಗಿ ನಂತರ ಪೊಲೀಸ್ ಠಾಣೆಗೆ ತೆರಳಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.
ಈ ಪ್ರತಿಭಟನೆಯಲ್ಲಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಹರ್ಷಿತ್ ವೆಂಕಟೇಶ್, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಯೋಗೇಶ್ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಯಶ್ವಂತ್ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪುನೀತ್, ಪ್ರಧಾನ ಕಾರ್ಯದರ್ಶಿಗಳಾದ ಅಮಿತ್, ರಾಕೇಶ್, ಹಾಗೂ ಕಾರ್ಯಕರ್ತರು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡರು
ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್
ಮಂಡ್ಯದಲ್ಲಿ NDA ಗೆಲ್ಲಬೇಕು: ಮಂಡ್ಯ ಗೆಲುವಿಗೆ ವಿಜಯೇಂದ್ರ ಕಾರ್ಯತಂತ್ರ
ಜೆಡಿಎಸ್ ಪಕ್ಷದ ಯುವ ಮುಖಂಡ ಚಂದನ್ಗೆ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಪಟ್ಟ