Wednesday, June 18, 2025

Latest Posts

ಸಿಎಂ ಪರ ಕಾಂಗ್ರೆಸ್‌ನಿಂದ ಪ್ರತಿಭಟನೆ: ಪ್ರೊಟೆಸ್ಟ್‌ನಿಂದ ದೂರ ಉಳಿದ ಪ್ರದೀಪ್ ಈಶ್ವರ್

- Advertisement -

Political News: ಕಾಂಗ್ರೆಸ್ ಕಾರ್ಯಕರ್ತರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಪ್ರತಿಭಟನೆಗೆ ಇಳಿದಿದೆ. ಆದರೆ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಈ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿಲ್ಲ. ಅಂದ್ರೆ ಈ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಪಾಲುದಾರಿಕೆ ಇದೆ ಎಂಬ ಆರೋಪ ಕೇಳಿಬಂದಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಆರೋಪಕ್ಕೆ ತಕ್ಕ ಉತ್ತರ ನೀಡಲಿ ಎಂಬುದು ಬಿಜೆಪಿಗರ ಆಗ್ರಹ. ಆದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರಾಕರಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಪರ ಪ್ರತಿಭಟನೆ ನಡೆಸಿದ್ದಾರೆ.

ಆದ್ರೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಈ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಯೇ ಪ್ರತಿಭಟನೆ ನಡೆದಿದ್ದರೂ, ಪ್ರದೀಪ್ ಮತ್ತು ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿಲ್ಲ. ಹಾಗಾಗಿ ಇದೀಗ ಈ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಾಗಿದೆ.

- Advertisement -

Latest Posts

Don't Miss