Tipaturu: ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಪ್ರೊಫೆಸರ್ ಬಿ ಕೃಷ್ಣಪ್ಪನವರು ಸ್ಥಾಪಿಸಿದ 47/74-75 ಮೂಲ ಸಂಘಟನೆಯ ರಾಜ್ಯ ಸಂಚಾಲಕರಾದ ಶಿವಮೊಗ್ಗ ಎಂ.ಗುರುಮೂರ್ತಿ ರವರ ನೇತೃತ್ವದ ತುಮಕೂರು, ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ ‘ದಲಿತ ಸಮುದಾಯಗಳಿಗೆ ಒಳಮೀಸಲಾತಿ ಒದಗಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವರದಿಯನ್ನು ಒಪ್ಪಿ, ಕೆಲವು ಮಾರ್ಪಾಡುಗಳೊಂದಿಗೆ ಜಾರಿಗೊಳಿಸುತ್ತಿರುವುದು ಅಭಿನಂದನೀಯ ಕ್ರಮ ಎಂದಿದ್ದಾರೆ.
ಎಡಗೈ ದಲಿತ ಸಮುದಾಯವು ಮೂರು ದಶಕಗಳಿಂದ ಒಳಮೀಸಲಾತಿಗಾಗಿ ನಡೆಸುತ್ತ ಬಂದ ಹೋರಾಟಕ್ಕೆ ಕಡೆಗೂ ಜಯವಾಗಿದ್ದು, ನ್ಯಾಯ ಸಿಕ್ಕಿದೆ. ಬಲಗೈ ದಲಿತ ಸಮುದಾಯ ಮತ್ತು ಸ್ಪೃಶ್ಯ ಪರಿಶಿಷ್ಟ ಜಾತಿಗಳಿಗೂ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸಮತೋಲನದ ಪ್ರಯತ್ನ ಮಾಡಲಾಗಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಸೂಕ್ತ ಸಾಮಾಜಿಕ ನ್ಯಾಯವನ್ನು ಒದಗಿಸಿಲ್ಲ ಎಂಬ ಅಂಶ ಮುನ್ನೆಲೆಗೆ ಬಂದಿದೆ’
‘ಅಲೆಮಾರಿ ಸಮುದಾಯಗಳು ಬೇರೆ ಶೋಷಿತ ಸಮುದಾಯಗಳಿಗಿಂತ ಭಿನ್ನವಾದ ಜೀವನ ವಿಧಾನವನ್ನು ಅಳವಡಿಸಿಕೊಂಡಿವೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೇರೆ ಯಾವುದೇ ಶೋಷಿತ ಸಮುದಾಯದ ಜತೆಗೆ ಸ್ಪರ್ಧೆ ಮಾಡಲಾಗದಂಥ ಸ್ಥಿತಿಯಲ್ಲಿವೆ. ಈ ವಾಸ್ತವವನ್ನು ಪರಿಗಣಿಸಿಯೇ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಒಳಮೀಸಲಾತಿಗೆ ಶಿಫಾರಸು ಮಾಡಿತ್ತು’ ಹಾಗಾಗಿ, ಶೇಕಡ ಒಂದರಷ್ಟು ಮೀಸಲಾತಿಯನ್ನು ಅಲೆಮಾರಿ ಸಮುದಾಯಕ್ಕೆ ಘೋಷಣೆ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ದ.ಸಂ.ಸ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅಲೆಮಾರಿ ಸಮುದಾಯದ ಮುಖಂಡ,ಕೃಷ್ಣಪ್ಪ,ರಂಗಸ್ವಾಮಿ,ಜಿಲ್ಲಾ ಸಂಘಟನಾ ಸಂಚಾಲಕರಾದ ನರಸಿಂಹಮೂರ್ತಿ.ಸುಶೀಲಮ್ಮ ಸೋಮಶೇಖರ್,ರಾಮಣ್ಣ ಮಂಜುನಾಥ. ನಂಜುಂಡಯ್ಯ. ವೆಂಕಟೇಶ್, . ಅರ್ಜುನ್ ಸಣ್ಣಯ್ಯ ಉಪಸ್ಥಿತರಿದ್ದರು