Kerala News:
ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್ನಲ್ಲಿ ದುಷ್ರ್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ನವದೆಹಲಿಯಲ್ಲಿ ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ನ ಕ್ಯಾಂಪಸ್ನಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದೆ. ಡ್ರಗ್ಸ್ ಸೇವಿಸಲು ಕ್ಯಾಂಪಸ್ ಬಳಸುತ್ತಿದ್ದಾರೆ. ಅತಿಕ್ರಮಣ ಪ್ರಶ್ನಿಸಿದಾಗ ಕೆಟ್ಟದಾಗಿ ಮಾತನಾಡಿದ್ದಾರೆ. ಕ್ಯಾಂಪಸ್ನಲ್ಲಿರುವ ವಿದ್ಯಾರ್ಥಿಗಳು ಇದರಿಂದ ಭಯಭೀತಗೊಂಡಿದ್ದು, ಭದ್ರತೆಯ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡರು. ಜೊತೆಗೆ ಸೂಕ್ತ ರಕ್ಷಣೆ, ನ್ಯಾಯ ಒದಗಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಪತ್ರ ಕೂಡಾ ಬರೆದಿದ್ದಾರೆ.




