Saturday, July 27, 2024

Latest Posts

ಸಾರ್ವಜನಿಕ ಗಣೇಶೋತ್ಸವ ಆಗಬೇಕು

- Advertisement -

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ರು.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 60 ಕ್ಕೂ ಹೆಚ್ಚು ಸೀಟ್ ಗಳನ್ನ ನಾವು ಇಲ್ಲಿ ಗೆಲ್ಲಲಿದ್ದೇವೆ. ಕೇಂದ್ರ, ರಾಜ್ಯ ಮತ್ತು ಪಾಲಿಕೆಯಲ್ಲೂ ನಾವೇ ಅಧಿಕಾರಕ್ಕೆ  ಬರ್ತೀವಿ, ಇನ್ನು 5 ವರ್ಷದಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಸಿದ್ದರಾಮಣ್ಣ ಸರ್ಕಾರ ಇದ್ದಾಗ ಎರಡು ವರ್ಷ ಹಣ ಪೆಂಡಿಂಗ್ ಇತ್ತು. ಅಭಿವೃದ್ಧಿ ಕಾರ್ಯಗಳು ಈಗ ಆರಂಭವಾಗಿವೆ. ರಸ್ತೆಗಳ ಕಾಮಗಾರಿ ಈಗ ಆರಂಭ ಆಗಿದೆ. ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಪೆಂಡಿಂಗ್ ಇಟ್ಟಿದ್ರು, ಆದ್ರೆ ಈ ಬಾರಿ ಎಲ್ಲವೂ ಕ್ಲಿಯರ್ ಆಗಿದೆ, ರಸ್ತೆಗಳ ನಿರ್ಮಾಣ ಕಾಮಗಾರಿ ಆಗುತ್ತೆ ಎಂದರು. ಗಣೇಶೋತ್ಸವ ಆಗಬೇಕು ಅನ್ನೋದರಲ್ಲಿ ನಾನು ಒಬ್ಬ… ಸಾರ್ವಜನಿಕ ಗಣೇಶೋತ್ಸವ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನಮ್ಮ ಪರಂಪರೆ ಜೊತೆ ಜನರ ಪ್ರಾಣವೂ ಅಷ್ಟೇ ಮುಖ್ಯ. ಸರ್ಕಾರ ಈಗ ತಜ್ಞರ ಅಭಿಪ್ರಾಯ ಪಡೆಯುತ್ತಿದೆ. ಅವರ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಕರ್ನಾಟಕ ಟಿವಿ –ಹುಬ್ಬಳ್ಳಿ

- Advertisement -

Latest Posts

Don't Miss