Thursday, October 2, 2025

Latest Posts

3,000 ಕೋಟಿ ಪರಿಹಾರಕ್ಕೆ ಆರ್. ಅಶೋಕ್ ಒತ್ತಾಯ!

- Advertisement -

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಬೃಹತ್ ನಷ್ಟ ಉಂಟಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ತುರ್ತು ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಆಗ್ರಹಿಸಿದರು. ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ ಆದರೆ ಸರ್ಕಾರ ಯಾವುದೇ ತಯಾರಿ ಮಾಡದೇ ನಿರ್ಲಕ್ಷ್ಯ ತೋರಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ 30ಕ್ಕೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಆದರೆ ಅವರು ಸ್ಥಳಕ್ಕೆ ಹೋಗುವ ಮುನ್ನ ಸಂತ್ರಸ್ತರಿಗೆ ತುರ್ತು ಪರಿಹಾರ ಘೋಷಿಸಬೇಕು ಎಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಹಾನಿ ತೀವ್ರವಾಗಿದೆ. ವಿಶೇಷವಾಗಿ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ನಷ್ಟ ಉಂಟಾಗಿದೆ. ಆದರೆ ಯಾವುದೇ ಸಚಿವರು ಇನ್ನೂ ಕ್ರಮ ಕೈಗೊಳ್ಳಲಿಲ್ಲ. ಉತ್ತರ ಕರ್ನಾಟಕ ಪ್ರವಾಹ ಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ತುರ್ತಾಗಿ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದರು.

ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದರು.

ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಗಳಲ್ಲಿ ದಿನಸಿ ವಿತರಣೆ ಮಾಡಲಾಗುತ್ತಿತ್ತು, ಆದರೆ ಈ ಸರ್ಕಾರ ಅರ್ಧ ಕೆ.ಜಿ ಅಕ್ಕಿಯೂ ನೀಡಿಲ್ಲ. ನಾನು ಸ್ಥಳಗಳಿಗೆ ಭೇಟಿ ನೀಡಿ, ಸರ್ಕಾರದ ನಿರ್ಲಕ್ಷ್ಯವನ್ನು ಜನರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss