Friday, June 20, 2025

Latest Posts

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

- Advertisement -

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೋಲಾರದಲ್ಲಿ ನಡೆದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿ, ಭಾನುವಾರ ಮಾತನಾಡಿದ ರಾಹುಲ್ ಗಾಂಧಿ ಅವರು, ‘ಮೋದಿ ಅವರ ಸರ್ಕಾರದಲ್ಲಿ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳ ಪೈಕಿ ಕೇವಲ 7% ಮಾತ್ರ ಹಿಂದುಳಿದವರು, ದಲಿತರು ಇದ್ದಾರೆ. ಇದು ಮೋದಿ ಅವರ ಕಾಳಜಿಯೇ? ಯುಪಿಎ ಸರ್ಕಾರ 2011ರಲ್ಲಿ ಜಾತಿ ಗಣತಿ ಮಾಡಿಸಿದ್ದು, ಅದರ ಪ್ರಕಾರ ದೇಶದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತರ ಜನಸಂಖ್ಯೆ ಎಷ್ಟಿದೆ? ಎಂದು ಬಹಿರಂಗಪಡಿಸಲಿ. ಜತೆಗೆ ಅದರ ಅನುಗುಣವಾಗಿ ಸರ್ಕಾರದ ಕಾರ್ಯದರ್ಶಿಗಳ ಮಟ್ಟದಲ್ಲಿ ಆಯಾ ಸಮುದಾಯಗಳಿಗೆ ಅಧಿಕಾರ ನೀಡಲಿ. ಇಲ್ಲದಿದ್ದರೆ ಈ ಸರ್ಕಾರ ಹಿಂದುಳಿದ ಹಾಗೂ ದಲಿತ ಸಮುದಾಯಗಳಿಗೆ ದ್ರೋಹ ಮಾಡಿದಂತೆ’ ಎಂದು ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದರು.

ಅಲ್ಲದೇ, ಇಲ್ಲಿ ಮುಂದಿನ ಕೆಲ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಸರ್ಕಾರ ರಾಜ್ಯದ ಯುವಕರು, ಮಹಿಳೆಯರು, ಬಡವರಿಗಾಗಿ ಏನು ಮಾಡಲಿದೆ ಎಂದು ಹೇಳುತ್ತೇನೆ. ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶದ ಚುನಾವಣೆ ನಂತರ ಜನರಿಗೆ ಯಾವ ಕಾರ್ಯಕ್ರಮ ನೀಡಬಹುದು ಎಂದು ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ನನ್ನನ್ನು ಕೇಳಿದರು. ಆಗ ನಾನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಎರಡು ಮೂರು ಭರವಸೆಗಳನ್ನು ಜಾರಿಗೆ ತರಬೇಕು. ಈ ಯೋಜನೆ ಜಾರಿ ಮಾಡಲು ವರ್ಷಾನುಗಟ್ಟಲೆ ಕಾಲಹರಣ ಮಾಡಬಾರದು. ಸರ್ಕಾರ ಬಂದ ಕೂಡಲೇ ಅವುಗಳನ್ನು ಅನುಷ್ಠಾನಕ್ಕೆ ತರಲು ಸೂಚಿಸಿದೆ. ಇದನ್ನು ನಾನು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೇಳಬಯಸುತ್ತೇನೆ.

ನಾವು ಕರ್ನಾಟಕ ಜನರಿಗೆ 4 ಗ್ಯಾರಂಟಿ ಯೋಜನೆ ನೀಡಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತ ನೀಡುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ. ಅನ್ನಭಾಗ್ಯದ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿ ನೀಡಲಾಗುವುದು. ಇನ್ನು ಯುವನಿಧಿ ಯೇಜನೆ ಮೂಲಕ ಪ್ರತಿ ತಿಂಗಳು ನಿರುದ್ಯೋಗ ಪಧವೀದರರಿಗೆ 3 ಸಾವಿರ, ಡಿಪ್ಲೋಮಾ ಪದವಿಧರರಿಗೆ 1500 ನೀಡಲಾಗುವುದು. ಈ ಭರವಸೆಗಳು ಸರ್ಕಾರ ಬಂದ ಮೊದಲ ದಿನ ಹಾಗೂ ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಬೇಕು ಎಂದು ಸೂಚಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು’

‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

‘ಸವದಿಗೆ ಏನು ಕಡಿಮೆ ಮಾಡಿದ್ವಿ..?, ಶೆಟ್ಟರ್‌ಗೆ ಇನ್ನೇನು ಮಾಡಬೇಕಿತ್ತು..?’

- Advertisement -

Latest Posts

Don't Miss