Sunday, September 8, 2024

Latest Posts

ರೈಲ್ವೆ ಮಾರ್ಗ ಸ್ಥಗಿತ ಪ್ರಯಾಣಿಕರ ಪರದಾಟ…!

- Advertisement -

www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಅವರನ್ನು ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.

ಇನ್ನೂ ಹಜರತ್ ನಿಜಾಮುದ್ದೀನ್- ವಾಸ್ಕೊ-ಡಿ- ಗಾಮಾ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ಎರಡೂ ರೈಲುಗಳಲ್ಲಿದ್ದ ಸಾವಿರಕ್ಕೂ ಹೆಚ್ಚು ಪ್ರಯಾಣಿಕರನ್ನು ಬಸ್ ಗಳ ಮೂಲಕ ಬೆಳಗಾವಿ, ಹುಬ್ಬಳ್ಳಿ ರೈಲ್ವೆ‌ ನಿಲ್ದಾಣಕ್ಕೆ ಕರೆದುಕೊಂಡು ಬರಲಾಗಿದೆ. ರೈಲ್ವೆ ಮಾರ್ಗಗಳ ದುರಸ್ತಿ ಕಾರ್ಯವೂ ಆರಂಭಗೊಂಡಿದೆ.

- Advertisement -

Latest Posts

Don't Miss