Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ. ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ. ಐಎಸ್ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ. ಮುಸಲ್ಮಾನರ ತುಷ್ಟೀಕರಣದ ಪರಾಕಾಷ್ಟೆ ಇದು. ಸಿದ್ದರಾಮಯ್ಯ ಅನಗತ್ಯವಾಗಿ ದ್ವೇಷ, ಅಸೂಯೆ ಹುಟ್ಟು ಹಾಕುತ್ತಿದ್ದಾರೆ. ಇದನ್ನೇ ಮುಂದುವರಿಸ್ತೀವಿ ಅನ್ನೋ ದಾರ್ಷ್ಟ್ಯ ತೋರಿಸ್ತಿದ್ದಾರೆ. ಸಿದ್ದರಾಮಯ್ಯನವರ ಹಿಂದೂ ದ್ವೇಷದ, ಮುಸ್ಲೀಮ್ ತುಷ್ಟೀಕರಣದ ಪರಾಕಾಷ್ಟೆ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಾವು ಹಿಂದೂ ಕಾರ್ಯಕರ್ತರ ಪರ ವಕೀಲರನ್ನು ಇಟ್ಟಿದ್ದೇವೆ. ಈ ಕೇಸ್ ನಮ್ಮ ಗಮನಕ್ಕೆ ಬಂದಿಲ್ಲ, ಬಂದಿದ್ರೆ ಹಿಂಪಡೀತಾ ಇದ್ವಿ. ರಾಮ ಮಂದಿರ ಉದ್ಘಾಟನೆ ಆಗುವಾಗ ಅರೆಸ್ಟ್ ಮಾಡುವ ಅಗತ್ಯ ಏನಿತ್ತು.? ಪೊಲೀಸ್ ಅಧಿಕಾರಿಗಳು ಸನ್ಫ್ಲವರ್ ಇದ್ದ ಹಾಗೆ. ಸರ್ಕಾರ ಅನ್ನೋ ಸೂರ್ಯ ಎತ್ತ ಕಡೆ ತಿರಗ್ತಾನೆ, ಅತ್ತ ಕಡೆ ತಿರಗ್ತಾರೆ ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.
ಎಮ್.ಬಿ. ಪಾಟೀಲ್ ಅವರ ಪಕ್ಷದ ಪರಿಸ್ಥಿತಿ ನೋಡಿಕೊಳ್ಳಲಿ. ಕಾಂಗ್ರೆಸ್ ರಾಮನ ಬಗ್ಗೆ ಅವಹೇಳನ ಮಾಡದಿದ್ದರೆ ಈ ಸ್ಥಿತಿ ಬರ್ತಿರಲಿಲ್ಲ. ಕಾಂಗ್ರೆಸ್ನವರು ಹುಚ್ಚುಹುಚ್ಚು ತನ ಮಾಡಿ ಈಗ ಮಾತನಾಡ್ತಿದ್ದಾರೆ. ಸಿದ್ದರಾಮಯ್ಯ ರಾಮ ಭಕ್ತರಾಗಿದ್ದರೆ ಅಯೋಧ್ಯೆಗೆ ಹೋಗಲಿ. ಹಳೇ ಕೇಸ್ ಅಂದರೆ ರಾಮ ಮಂದಿರ ಹೋರಾಟದ ಕೇಸ್ ಹೊರಗೆ ತೆಗೆಯಲು ಸಿಎಮ್ ಹೇಳಿದ್ದಾರೆ. ಇದರ ವಿರುದ್ಧ ನಾಳೆ ಬಿಜೆಪಿಯಿಂದ ಹೋರಾಟ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’
ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..
‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’