“ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ”: HDK

State News:

Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಹೇಳಿದ್ದಾರೆ.ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಂದಿರ ನಿರ್ಮಾಣದ ಬಗ್ಗೆ ಇವತ್ತು ಘೋಷಣೆ ಮಾಡಿದ್ದಾರೆ ಅಷ್ಟೇ. ನಾಳೆ ಬೆಳಗ್ಗೆ ಕಟ್ಟಲು ಇವರಿಂದ ಸಾದ್ಯವಿಲ್ಲ. ಮುಂದಿನ ಸರ್ಕಾರ ಬಂದ ಮೇಲೆ ಕಾಮಗಾರಿ ಆಗಬೇಕು, ಮುಂದಿನ ಸರ್ಕಾರ ಬಿಜೆಪಿ ಬರಲ್ಲ. ಮುಂದಿನ ಸರ್ಕಾರ ನನ್ನ ನೇತೃತ್ವದಲ್ಲಿ ಇರಲಿದೆ. ಅವರ ಆಸೆಯನ್ನ ನಾನೇ ನೆರವೇರಿಸುತ್ತೇನೆ ಎಂದರು.

ಮಹಾ ಶಿವರಾತ್ರಿ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ..!

ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೋತ್ಸವ ಹಿನ್ನಲೆ; ಪೂರ್ವಸಿದ್ಧತೆ

ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

About The Author