special story
ಒಂದು ಊರಿನಲ್ಲಿ ಒಬ್ಬ ಮುದುಕಿಯಿದ್ದಳು. ಅವಳು ಗುಡಿಸಲಿನಲ್ಲಿ ವಾಸವಾಗಿ ಕೂಲಿ ಕೆಲಸ ಮಾಡುತ್ತಾ ತನ್ನ ಜೀವನ ಸಾಗಿಸುತ್ತಿದ್ದಳು. ಅದೇ ಊರಿನಲ್ಲಿ ಒಂದು ಶ್ರೀಮಂತ ಮನೆತನವಿತ್ತು, ಆ ಮನೆಯ ಒಡತಿ ಗೌರಮ್ಮ ದೀನ ದಲಿತರ ಬಗ್ಗೆ ಅನುಕಂಪವುಳ್ಳವಳಾಗಿದ್ದಳು. ತನ್ನ ಮನೆಗೆ ಬಂದ ಅತಿಥಿಗಳಿಗೆ ಉಣಿಸಿ ಅವರ ಮನ ತಣಿಸುತ್ತಿದ್ದಳು ಹಾಗೂ ಬಡವರಿಗೆ ದಾನ ಮಾಡುತ್ತಿದ್ದಳು.
ಒಮ್ಮೆ ಆ ಊರಿಗೆ ಒಬ್ಬ ಕೀರ್ತನಕಾರ ಬಂದನು. ಅವನು ಅಲ್ಲಿಯ ಶ್ರೀ ಮಾರುತಿಯ ದೇವಸ್ಥಾನದಲ್ಲಿ ಪ್ರತಿ ದಿನ ಸಂಜೆಯ ವೇಳೆಗೆ ರಾಮಾಯಣ ಹೇಳುತ್ತಿದ್ದನು, ಆ ಶಾ ಯು ಹೇಳುವ ರಾಮಾಯಣವನ್ನು ಕೇಳಲು ಜನ ಕ್ಕಿರಿದು ತುಂಬಿರುತ್ತಿದ್ದರು. ಆ ಜನರ ಗುಂಪಿನಲ್ಲಿ ಬಡ ಮುದುಕಿಯೂ ಇರುತ್ತಿದ್ದಳು. ಆದರೆ ಶ್ರೀಮಂತ ಮನೆಯ ಗೌರಮ್ಮನಿಗೆ ಅನೇಕ ಮನೆ ಕೆಲಸಗಳಿಂದ ರಾಮಾಯಣ ಕೇಳಲು ಆಗುತ್ತಿರಲಿಲ್ಲ. ಅದಕ್ಕಾಗಿ ಗೌರಮ್ಮನು ತನ್ನ ಮನದೊಳಗೆ ಚಿಂತಿಸುತ್ತಿದ್ದಳು.
ಒಂದು ದಿನ ಆ ಬಡ ಮುಡುಕಿಯು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಬೇಕಾಗಿದ್ದರಿಂದ ಬೇಗ ಉಂಡು ಹೋಗಬೇಕೆಂದು ಗೌರಮ್ಮನ ಮನೆಗೆ ಮಜ್ಜಿಗೆ ತರಲಿಕ್ಕೆಂದು ಬಂದಳು. ಈ ಮುದುಕಿಯು ಗೌರಮ್ಮನಿಗೆ “ನೀವು ಮಾರುತಿ ದೇವಸ್ಥಾನಕ್ಕೆ ರಾಮಾಯಣ ಕೇಳಲು ಬರುವುದಿಲ್ಲವಲ್ಲ ಶಾಸ್ತ್ರಿಗಳು ಬಹಳ ಚೆನ್ನಾಗಿ ಹೇಳುತ್ತಾರೆ, ಈ ದಿನವಾದರೂ ಬನ್ನಿ’ ಪದರು ಆಗ ಗೌರಮ್ಮನು, ನನಗೆ ಮನೆಗೆಲಸದಿಂದಾಗಿ ಅಲ್ಲಿಗೆ ಹೋಗಲು ಆಗುವುದಿಲ್ಲ. ಏನು ಮಾಡುವುದು, ಮಕ್ಕಳು ಮರಿಗಳಿಗೆ ಅಡುಗೆ ಮಾಡಿ ಉಣಿಸುವುದರಲ್ಲಿಯೇ ವೇಳೆ ಕಳೆದು ಹೋಗುತ್ತದೆ. ನೀನು ಅಲ್ಲಿಗೆ ದಿನಾ ಕೇಳಲು ಹೋಗುವಿಯಲ್ಲ ಅವರು ಏನು ಹೇಳಿದರೆಂಬುದನ್ನು ನೀನು ಕೇಳಿರುವ, ಅದನ್ನೇ ನನಗೆ ಈಗ ಹೇಳುವರು ಈ ಮಾತುಗಳನ್ನು ಕೇಳಿ ಮುದುಕಿಗೆ ಜೈ ತೋಚದಂತಾಯಿತು. ನಾನು ಬೇಗ ಮಜ್ಜಿಗೆ ಒಯ್ದು ಉಂಡು ಬೇರೆಯವರ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಬೇಕು. ರಾಮಾಯಣ ಎಷ್ಟು ಹೇಳಿದರೂ ಮುಗಿಯುವುದಿಲ್ಲ. ಏನು ಮಾಡುವುದು, ಹೇಗೆ ಹೇಳಬೇಕು ಎಂಬುದು ಅವಳಿಗೆ ತಿಳಿಯದಂತಾಯಿತು. ಕೊನೆಗೆ ಅವಳು ತನ್ನ ಬುದ್ಧಿಯನ್ನು ಉಪಯೋಗಿಸಿ ರಾಮ ಬಂದ, ರಾವಣನ ಕೊಂದು ಸೀತೆಯನ್ನು ತಂದ, ತರಿ ಮಜ್ಜಿಗೆ ಎಂದಳು. ಈ ಮೂರು ಮಾತುಗಳನ್ನು ಕೇಳಿ ಗೌರಮ್ಮ ಸಂತೋಷದಿಂದ ರಾಮಾಯಣ ಇಷ್ಟೇ ಇರಬಹುದೆಂದು ತಿಳಿದು ಆ ಮುದುಕಿಗೆ ಮಜ್ಜಿಗೆಯನ್ನು ಕೊಟ್ಟಳು. ಮುದುಕಿಯು ಹಿಗ್ಗಿನಿಂದ ಮಜ್ಜಿಗೆಯನ್ನು ತೆಗೆದುಕೊಂಡು ತನ್ನ ಗುಡಿಸಲಿಗೆ ಹೋದಳು.