Political News:
ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ, ಯಾವ ತನಿಖೆ ಬೇಕಾದ್ರೂ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.




