National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ.
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್, ಅರುಣ್ ಮತ್ತು ರಾಜಸ್ಥಾನದ ಸತ್ಯನಾರಾಯಣ್ ಎಂಬುವವರು ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿ, ಕಳುಹಿಸಿದ್ದರು.
ಇದರಲ್ಲಿ ಅರುಣ್ ಕೆತ್ತಿದ ರಾಮಲಲ್ಲಾ ಮೂರ್ತಿ ಸೆಲೆಕ್ಟ್ ಆಗಿದ್ದು, ಇವರು ಈ ಮೊದಲೇ ಹಲವು ವಿಗ್ರಹಗಳನ್ನು ಕೆತ್ತಿ, ಪ್ರಧಾನಿ ಮೋದಿಯವರಿಗೆ ಉಡುಗೊರೆ ನೀಡಿದ್ದಾರೆ. ಅಲ್ಲದೇ, ಇವರ ಶಿಲ್ಪಕಲೆಗೆ ಪ್ರಧಾನಿ ಭೇಷ್ ಎಂದಿದ್ದಾರೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ
‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’
ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್