National News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ಕೆಂಪುಕೋಟೆಯಲ್ಲಿ ಪ್ರಧಾನಿ ಮಮೋದಿ 10ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು.
10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಧ್ವಜಾರೋಹಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದರು.
ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದ್ದುದು ವಿಶೇಷವಾಗಿತ್ತು.
Junior College: ಹೆಲಿಕಾಪ್ಟರ್ ಮೂಲಕ ಭೈರತಿ ಬಸವರಾಜ್ ಅವರಿಂದ ಪುಷ್ಪಾರ್ಚನೆ..
Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ