Ramanagara News: ಮಂಚನಬೆಲೆ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಚನಬೆಲೆ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ ನದಿ ಪಾತ್ರಕ್ಕೆ ನೀರನ್ನು ಬಿಡಬೇಕಾಗುವ ಸಂಭವ ಇರುತ್ತದೆ. ಆದ್ದರಿಂದ ಜಲಾಶಯದ ಕೆಳಗಿನ ನದಿ ಪಾತ್ರದ ಅಕ್ಕಪಕ್ಕದ ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವುದಾಗಲಿ, ಸಾರ್ವಜನಿಕರು ನದಿಯನ್ನು ದಾಟುವುದಾಗಲಿ ಮಾಡಬಾರದೆಂದು ಈ ಮೂಲಕ ಎಚ್ಚರಿಕೆಯಿಂದಿರಲು ಕೋರಲಾಗಿದೆ.
Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು
National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?
ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ