Thursday, April 24, 2025

Latest Posts

Darshan Case: ಅವನ ಪಾಪದ ಕೊಡ ತುಂಬಿತ್ತು! ; ವಿ.ಮನೋಹರ್ ಹೀಗೆ ಹೇಳಿದ್ದೇಕೆ?

- Advertisement -

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನೂ ಪ್ರಕರಣದ ಸಂಬಂಧ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಆಗುತ್ತಲೇ ಇವೆ. ಇದರ ಇಡುವೇ ಇದೀಗ ವಿ.ಮನೋಹರ್ ಪ್ರತಿಕ್ರಿಯಿಸಿದ್ದಾರೆ.

ಲಾಲಿಹಾಡು ಸಿನಿಮಾದಲ್ಲಿ ನಾನು ದರ್ಶನ್ ಅವರ ಜೊತೆ ಕೆಲಸಮಾಡಿದ್ದೇನೆ. ಅವರು ಸಹೃದಯಿ ಎಂದಿದ್ದಾರೆ. ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ. ಆಕಸ್ಮಿಕವಾಗಿ ಇದು ನಡೆದುಹೋಗಿದೆ. ಸತ್ತವನಂತೂ ಖಂಡಿತ ಒಳ್ಳೆಯವನಲ್ಲ. ಸಾವಿರಾರು ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡಿರುವ ವಿಕೃತಕಾಮಿ ಎಂದು ಗುಡುಗಿದ್ದಾರೆ. ಅವನ ಪಾಪದ ಕೊಡ ತುಂಬಿದೆ ಅದಕ್ಕೆ ತಕ್ಕ ಶಿಕ್ಷೆ ಆಗಿದೆ. ಆದರೆ ಇದು ಪೊಲೀಸ್‍ನವರಿಂದ ಆಗಬೇಕಿತ್ತು. ಆದರೆ ದರ್ಶನ್ ಸರ್ ಬ್ಯಾಡ್ ಟೈಂ ಆಗಿರಬಹುದು. ಅವರು ಆ ಕಳಂಕದಿಂದ ಹೊರಬಂದು ಮೊದಲಿನಂತೆ ಸಿನಿಮಾದಲ್ಲಿ ಆಕ್ಟ್ ಮಾಡಲಿ ಎಂದು ವಿ. ಮನೋಹರ್ ತಿಳಿಸಿದ್ದಾರೆ.

ದರ್ಶನ್ ಹೀರೋ ಆಗುವ ಮೊದಲೇನೇ ಜನುಮದ ಜೋಡಿ ಚಿತ್ರಕ್ಕೆ ಕ್ಯಾಮೆರಾ ಅಸಿಸ್ಟೆಂಟ್ ಆಗಿದ್ರಲ್ವಾ ಆವಾಗಲೇ ಪರಿಚಯ ಇತ್ತು. ಆಗಾಗ ಮುಹೂರ್ತ ಕಾರ್ಯಕ್ರಮಗಳಲ್ಲಿ ಸಿಗುತ್ತಾ ಇದ್ವಿ. ದರ್ಶನ್ ಬಹಳ ಸಹೃದಯಿ ಮನುಷ್ಯ. ಅನೇಕರಿಗೆ ಕಷ್ಟದಲ್ಲಿ ಸಹಾಯ ಮಾಡಿದ್ದಾರೆ. ಲಾಲಿಹಾಡು ಸಿನಿಮಾ ಸಮಯದಲ್ಲಿ ನನಗೂ ಸಹಾಯ ಮಾಡಿದ್ದರು. ಕೆಲಸ ಮಾಡುವಾಗ ನನಗೆ ಡಯಟ್ ಮಾಡೋದು ಹೇಗೆ ? ಯಾವ ವ್ಯಾಯಾಮ ಮಾಡಬೇಕು ಎಲ್ಲಾ ಹೇಳ್ತಿದ್ದರು. ಅದಾದ್ಮೇಲೆ ಮಧ್ಯೆ ಗ್ಯಾಪ್ ಆಯ್ತು ಎಂದು ವಿ.ಮನೋಹರ್ ಹೇಳಿದ್ದಾರೆ.

ಈ ಘಟನೆ ಆಗೋ ಮೂರು ದಿನದ ಮುಂಚೆ ನಾನು ಫೋನ್ ಮಾಡಿ ಕೇಳಿದೆ, ದರ್ಶನ್ ಸರ್ ಲಾಲಿಹಾಡು ಆದ್ಮೇಲೆ ನಾವು ಮತ್ತೆ ಮಾಡಿಲ್ಲ ಅಂತ. ಖಂಡಿತ ಜೊತೆಯಲಿ ಕೆಲಸ ಮಾಡೋಣ ಎಂದರು. ಅದಾದ್ಮೇಲೆ ಮೂರು ದಿನದಲ್ಲಿ ಈ ಪ್ರಕರಣ ಆಯ್ತು. ಈ ಕಳಂಕದಿಂದ ಅವರು ಹೊರ ಬರಲಿ ಮತ್ತೆ ಸಿನಿಮಾಗಳಲ್ಲಿ ಮಾಡಲಿ. ಇಂಥಹ ದುರ್ಘಟನೆಗಳು ಯಾವತ್ತೂ ಆಗದೆ ಇರಲಿ ಎಂದು ಆಶಿಸುತ್ತೇನೆ ಎಂದು ದರ್ಶನ್ ಪ್ರಕರಣ ಕುರಿತು ಮನೋಹರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss