Political News:
ಸರಕಾರದ ಈ ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ.
ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿಗೌಡ ಹಾಲಕ್ಕಿ ಅವರ ಸಾಧನೆಯನ್ನು ಬಿಂಬಿಸುವ ಸ್ತಬ್ಧಚಿತ್ರಕ್ಕೆ ಆಯ್ಕೆ ಸಮಿತಿ ಸಮ್ಮತಿ ಸೂಚಿಸಿತ್ತಾದರೂ ಕೊನೆಯ ಸುತ್ತಿನ ಸಭೆಯಲ್ಲಿ ತಿರಸ್ಕೃತಗೊಂಡಿತು ಎಂದು ಮೂಲಗಳಿಂದ ತಿಳಿದು ಬಂದಿದೆ.ಕೇಂದ್ರ ಸರಕಾರ ಅನುಮತಿ ನಿರಾಕರಿಸಿರುವುದು ರಾಜ್ಯ ಬಿಜೆಪಿ ಸರಕಾರದ ನಿಷ್ಕ್ರಿಯತೆಗೆ ಸಾಕ್ಷಿ ಎಂದು ಕಾಂಗ್ರೆಸ್ ಟೀಕಿಸಿದೆ ಎನ್ನಲಾಗುತ್ತಿದೆ.
ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!