- Advertisement -
ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಆರ್ ಎಲ್ ಕಶ್ಯಪ್ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಆಧ್ಯಾತ್ಮಿಕ ಸಂಘಟನೆ ಸಾಕ್ಷಿ ಟ್ರಸ್ಟ್ ನ ಸ್ಥಾಪಕರಾಗಿದ್ದರರು. ಇವರಿಗೆ 2021ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು ಇವರಿಗೆ 85 ವರ್ಷ ವಯಸ್ಸಾಗಿತ್ತು.
ಆರ್ ಎಲ್ ಕಶ್ಯಪ್ ಅವರು ಗಣಿಜ್ಞರೂ ಆಗಿದ್ದರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಧ್ಯಯನ ಮಾಡಿ, ಅಮೇರಿಕಾ ವರ್ಡ್ಯೂ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸಿದ್ದರು.ಕಂಪ್ಯೂಟರ್ ಪ್ಯಾಟರ್ನ್ ರೆಕಗ್ನಿಷನ್, ಮೆಷಿನ್ ಇಂಟಲಿಜೆಂಟ್ ಮತ್ತು ವೈದಿಕ ಅಧ್ಯಯನ ಕ್ಷೇತ್ರದಲ್ಲಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
- Advertisement -