Monday, November 17, 2025

Latest Posts

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

- Advertisement -

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ.

ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿದ್ದಾರೆ. ಇದೇ ವೇಳೆ ವರಿಷ್ಠರ ಜೊತೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಅವಕಾಶ ಪಡೆಯಲಿದ್ದಾರೆ. ಈ ವೇಳೆ ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಭೇಟಿಯಾಗಿ ತಾಂತ್ರಿಕ ಚರ್ಚೆ ನಡೆಸುವ ಸಾಧ್ಯತೆಯೂ ಇದೆ. ನಾಲ್ಕು ದಿನಗಳ ನಂತರ, ಅಂತಿಮ ನಿರ್ಧಾರಕ್ಕಾಗಿ ಅವರು ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಭೇಟಿಸುವ ಸಾಧ್ಯತೆಯಿದೆ.

ಸಂಪುಟದಿಂದ ಕೈಬಿಡಲಾಗುವ ಸಚಿವರು ಮತ್ತು ಹೊಸದಾಗಿ ಸೇರಲಿರುವ ಶಾಸಕರ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ತಯಾರಿಸಿದ್ದಾರೆ. ಹಿಂದಿನ ಸಹಕಾರ ಸಚಿವ ಕೆ.ಎನ್. ರಾಜಣ್ಣ, ರಾಹುಲ್ ಅವರ ವೋಟ್ ಚೋರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸಂಪುಟದಿಂದ ವಜಾಗೊಳಿಸಲ್ಪಟ್ಟಿದ್ದರು. ಬದಲಾದ ರಾಜಕೀಯದಲ್ಲಿ ಅವರು ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಅವರ ಮಗ ರಾಜೇಂದ್ರ ದೆಹಲಿಯಲ್ಲಿ ಹಲವಾರು ಬಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಒಪ್ಪಂದ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸುತ್ತವೆ.

ಪಕ್ಷದ ಹೈಕಮಾಂಡ್ ಸಿಎಂಗೆ ಸಂಪುಟ ಪುನಾರಚನೆ ಮಾಡಲು ಹಸಿರು ನಿಶಾನೆ ನೀಡಿದ್ದು, ಸಿದ್ದರಾಮಯ್ಯ ಅದಕ್ಕೆ ಉತ್ಸುಕತೆಯನ್ನು ತೋರಿಸುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ನಿರೀಕ್ಷೆ ಬಳಿಕ ಪುನಾರಚನೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ರಾಜಕೀಯ ಪಂಡಿತರು ಭವಿಷ್ಯದ 2028 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಪುನಾರಚನೆಯೊಂದಿಗೆ ಹೊಸದಾಗಿ ರೂಪಿಸಿಕೊಳ್ಳಲಿದೆ ಎಂದು ವಿಶ್ಲೇಷಿಸಿದ್ದಾರೆ.

ಈ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುನಾರಚನೆ ನಿಲ್ಲಿಸುವ ತಂತ್ರವನ್ನು ರೂಪಿಸಲು ದೆಹಲಿಯಲ್ಲಿ ಇದ್ದಿದ್ದು, ಈ ಯೋಜನೆ ಎಷ್ಟು ಯಶಸ್ವಿಯಾಗುತ್ತದೆಯೆ ಎಂಬುದನ್ನು ಗಮನಿಸುತ್ತಿರುವುದು ಗಮನಾರ್ಹವಾಗಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss