Friday, October 18, 2024

Latest Posts

Sai Pallavi : ಆಧ್ಯಾತ್ಮದೆಡೆ ಸಾಯಿ ಪಲ್ಲವಿ ಚಿತ್ತ..?!

- Advertisement -

Film News : ಸಹಜ ಸುಂದರಿ ಸಾಯಿ ಪಲ್ಲವಿ ಇತ್ತೀಚೆಗಷ್ಟೇ ಅಮರನಾಥ ಯಾತ್ರೆ ಮುಗಿಸಿ ಬಂದಿದ್ರು… ಆದ್ರೆ ಇದೀಗ ಮತ್ತೆ ನಟಿ ಹಿಮಾಲಯದ ತಪ್ಪಲಿನಲ್ಲಿ ಸುತ್ತಾಡುತ್ತಿದ್ದಾರೆ. ಅಭಿಮಾನಿಗಳು ಇವರೇನಾದ್ರು ಆಧ್ಯಾತ್ಮದ ಹಾದಿ ಹಿಡಿದ್ರಾ ಅಂತಾ ಕೇಳ್ತಿದ್ದಾರೆ. ಹಾಗಿದ್ರೆ ಸಿನಿಮಾ ಆಫರ್ ಇಲ್ವಾ ಈ ನಟಿಗೆ ಇಲ್ಲ ಆ ಒಂದು ಹೇಳಿಕೆಯೇ ಮುಳುವಾಯ್ತಾ ಆಕೆಗೆ..?! ಏನಿದು ಸ್ಟೋರಿ…ಹೇಳ್ತೀವಿ ನೋಡಿ……..

ನಟಿ ಸಾಯಿ ಪಲ್ಲವಿ ಅಮರನಾಥ ಯಾತ್ರೆ ಮಾಡಿದ್ದು ಹಿಂದೆ ಸುದ್ದಿಯಾಗಿತ್ತು. ಈಗ ಮತ್ತೆ ಅವರು ಹಿಮಾಲಯದ ಬೆಟ್ಟಗಳಲ್ಲಿ ಸುತ್ತಾಡುವ ಫೋಟೋ ವೈರಲ್ ಆಗಿದೆ. ನಟನೆ ಬಿಟ್ಟು ಅಧ್ಯಾತ್ಮದ ಹಾದಿ ಹಿಡಿದರಾ ಈ ರೌಡಿ ಬೇಬಿ ಅಂತ ಶಾಕ್ ಆಗಿದ್ದಾರೆ ಫ್ಯಾನ್ಸ್.

ಕಳೆದೊಂದು ತಿಂಗಳಿಂದ ಸಾಯಿ ಪಲ್ಲವಿ ರುದ್ರಾಕ್ಷಿ ಮಾಲೆ ಹಾಕ್ಕೊಂಡು ಹಿಮಾಲಯ ಬೆಟ್ಟ ಅಲೀತಿದ್ದಾರೆ. ತನ್ನ ಪೋಷಕರನ್ನು ಕರೆದುಕೊಂಡು ಅಮರನಾಥ ಯಾತ್ರೆ ಮಾಡಿದ್ದಾರೆ. ಸಾಯಿ ಪಲ್ಲವಿ ಸಾಮಾನ್ಯರಂತೆ ಸರಳ ಉಡುಪು ಧರಿಸಿ ಅಧ್ಯಾತ್ಮ ಪ್ರವಾಸ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರರಂಗಕ್ಕೆ ಗುಡ್‌ಬೈ ಹೇಳ್ತಾರೆ ಅನ್ನೋ ಸುದ್ದಿ ಈಗ ಕೇಳಿ ಬರ್ತಿದೆ. ಗಾರ್ಗಿ ರಿಲೀಸ್ ಆಗಿ ವರ್ಷ ಉರುಳಿದೆ. ಬಳಿಕ ಒಂದೂ ಸಿನಿಮಾ ಬಂದಿಲ್ಲ.

ವಿರಾಟ ಪರ್ವಂ ಸಿನಿಮಾ ರಿಲೀಸ್‌ ವೇಳೆ ಅವರು ಸಂದರ್ಶನವೊಂದರಲ್ಲಿ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಿರದಿದ್ದರೆ. ಇಷ್ಟೊತ್ತಿಗೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಆಗಿರುತ್ತಿದ್ದರು ಅನ್ನೋದು ಅವರ ಅಭಿಮಾನಿಗಳ ಅಭಿಪ್ರಾಯ.

ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಸಾಯಿ ಪಲ್ಲವಿ ಆಡಿದ್ದ ಒಂದು ಮಾತು ಅವರನ್ನು ಹಿಮ್ಮೆಟ್ಟಿಸಿತು. ಅವರ ವಿರಾಟಪರ್ವಂ ಸಿನಿಮಾಕ್ಕೆ ಬ್ಯಾನ್ ಕೂಗು ಕೇಳಿಬಂತು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿತು. ಈಕೆಯ ಸಿನಿಮಾಗಳನ್ನು ಜನ ನೋಡಲ್ಲ ಅಂತ ಗೊತ್ತಾಗಿದ್ದೇ ಈಕೆಗೆ ಬರುವ ಆಫರ್‌ ಕಡಿಮೆ ಆದವು.

‘ಕಾಶ್ಮೀರ ಪಂಡಿತರ ಹತ್ಯೆ ಮತ್ತು ಹಸು ಕಳ್ಳ ಸಾಗಣೆ ಮಾಡಿದ ಎಂದು ಅನುಮಾನಿಸಿ, ಚಾಲಕನನ್ನು ಹತ್ಯೆ ಮಾಡುವುದು ಎರಡೂ ಒಂದೇ,’ ಎಂದು ಹೇಳಿದ್ದರು. ಹಿಂಸೆ ಯಾವುದೇ ರೂದಲ್ಲಿದ್ದರೂ ಅದು ಮಹಾ ಪಾಪ ಎನ್ನೋ ಮೂಲಕ ದೊಡ್ಡ ಮಟ್ಟದ ವಿವಾದವನ್ನು ಸಾಯಿ ಪಲ್ಲವಿ ತಲೆ ಮೇಲೆ ಎಳೆದು ಕೊಂಡಿದ್ದರು. ಪರ ವಿರೋಧ ಚರ್ಚೆಯ ನಡುವೆಯೂ ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಿತ್ತು.

ಸದ್ಯ ಸಾಯಿ ಪಲ್ಲವಿ ಹಿಮಾಲಯದಿಂದ ಮರಳಿದ್ದಾರೆ. ಅಧ್ಯಾತ್ಮ ಪ್ರವಾಸ ಅವರ ವೈರಾಗ್ಯದ ಸಂಕೇತ ಅಂತ ಅಭಿಮಾನಿಗಳು ಮಾತಾಡಿಕೊಳ್ಳುತ್ತಿದ್ದಾರೆ.

Thamanna : ಕಾವಲಯ್ಯ ಬೆಡಗಿ ಮೇಲೆ ವಿಜಯ್ ಅಭಿಮಾನಿಗಳ ಸಿಟ್ಟೇಕೆ..?!

Kaira adwani: ತಾಯಿಯಾಗುವ ಬಯಕೆ ವ್ಯಕ್ತಪಡಿಸಿದ ಬಾಲಿವುಡ್ ನಟಿ ಕಿಯಾರಾ ಅದ್ವಾನಿ

Dhanveer Gowda : ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ

 

- Advertisement -

Latest Posts

Don't Miss