ಉತ್ತರಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ರ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಅಂತ ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ ಆಂದೋಲನಕ್ಕೆ ಕರೆ ನೀಡಿದೆ.
ಇನ್ನು ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೆ ಅಂದರೆ ಸುಮಾರು 6ತಾಸು ರೈಲು ತಡೆ ನಡೆಲಿವೆ.
ಇನ್ನು ಕೇಂದ್ರ ಗೃಹ ಇಲಾಖೆಯ ಸಚಿವ ಅಜಯ್ ವಜಾಗೊಳಿಸಿದಂತೂ ನಮಗೆ ನ್ಯಾಯ ಸಿಗುವುದಿಲ್ಲ. ಅಲ್ಲದೆ ಅವರು ಹುದ್ದೆಯಲ್ಲಿರುವವರೆಗೂ ಪ್ರಕರಣದ ನ್ಯಾಯಸಮ್ಮತ ತನಿಖೆಗೆ ಅವಕಾಶವೇ ಇರೋದಿಲ್ಲ. ಹೀಗಾಗಿ ಅವರನ್ನು ವಜಾಗೊಳಿಸಬೇಕು ಅಂತ ಸಂಯುಕ್ತ ಕಿಸಾನ್ ಸೇನೆ ಒತ್ತಾಯಿಸಿದೆ.




