Friday, November 21, 2025

Latest Posts

ಖ್ಯಾತ ಖಳನಟ ಹರೀಶ್ ರಾಯ್ ನಿಧನ

- Advertisement -

ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ.. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಹರೀಶ್ ರಾಯ್ ನಟಿಸಿದ್ರು. ಕೆಲ ವರ್ಷಗಳಿಂದ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು, ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ರಾಯ್‌ ನಿಧನ ಹೊಂದಿದ್ದಾರೆ.

ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
ಕಳೆದ ಕೆಲವು ತಿಂಗಳುಗಳಿಂದ ಸತತವಾಗಿ ಚಿಕಿತ್ಸೆ ಪಡೆಯುತ್ತಲೇ ಇದ್ದರು . ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ, ಇನ್ನು ಹಲವಾರು ಮಂದಿ ನಟ, ನಟಿಯರು ಆರ್ಥಿಕ ಸಹಾಯ ಮಾಡಿದ್ದರು.

ಕರಾವಳಿ ಮೂಲದ ಹರೀಶ್ ರಾಯ್, 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ, ಹರೀಶ್ ರಾಯ್ ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ ಸಿನಿಮಾದಲ್ಲೂ ನಟಿಸಿದ್ದರು.

- Advertisement -

Latest Posts

Don't Miss