Tuesday, June 17, 2025

Latest Posts

Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ

- Advertisement -

State news: ಇಂದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು.

ನಾಡಿನ ಕೈಗಾರಿಕ ವಲಯದ ಅಭೀವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರ ಶ್ರಮ ಸಾಕಷ್ಟಿದೆ. ಕಾರ್ಮಿಕ ವಲಯದ ಶ್ರಮವನ್ನು ಪರಿಗಣಿಸಿ ಈಗಾಗಲೇ ಅವರುಗಳ ಆರೋಗ್ಯ ಹಾಗೂ ವಸತಿಯ ವಿಚಾರದಲ್ಲಿ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

1996 ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ ಅನ್ವಯ ಕಾರ್ಮಿಕರ ಹಿತರಕ್ಷಣೆಗಾಗಿಯೇ ರಾಜ್ಯ ಸರ್ಕಾರವು 2007 ರಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಿ ಕಾಲ ಕಾಲಕ್ಕೆ ಕಾರ್ಮಿಕರ ಮೂಲಭೂತ ಸೌಕರ್ಯಗಳನ್ನು ನೀಗಿಸುತ್ತಿದೆ.

ಈ ಹಿನ್ನೆಲೆಯಲ್ಲಿಯೇ ಇಂದು ನಡೆದ ಸಭೆಯಲ್ಲಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಈ ಸಬೆಯಲ್ಲಿ ಮಾನ್ಯ ವಸತಿ ಸಚಿವರಾದ ಶ್ರೀ ಜಮೀರ್ ಅಹ್ಮದ್ ಖಾನ್, ಶ್ರೀ ರಹೀಂ ಖಾನ್, ಪೌರಾಡಳಿತ ಸಚಿವರು, ಕಾರ್ಮಿಕ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Mari Matha Temple : 150 ವರ್ಷ ಇತಿಹಾಸದ ದೇಗುಲ ದ್ವಂಸ…!

Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು

Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!

- Advertisement -

Latest Posts

Don't Miss