ಶಿವಮೊಗ್ಗ: ಆಗಸ್ಟ್ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ
ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಬಿಗುವಿನ ವಾತಾವರಣ ಏರ್ಪಟ್ಟಿದ್ದಂತ ಜಿಲ್ಲೆಯಲ್ಲಿ, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಈ ನಡುವೆಯೂ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 23ರವರೆಗೆ ಶಿವಮೊಗ್ಗ ತಾಲೂಕಿನಾಧ್ಯಂತ ನಿಷೇಧಾಜ್ಞೆ ಮುಂದುವರೆಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿಯವರು ಆದೇಶ ಹೊರಡಿಸಿದ್ದು, ದಿನಾಂಕ 23-08-2022ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರು ಸೇರೋದಕ್ಕೆ ಅವಕಾಶವಿಲ್ಲ. ಯಾವುದೇ ಸಭೆ-ಸಮಾರಂಭ ಮಾಡಲು ಅನುಮತಿಯಿಲ್ಲ. ಪ್ರತಿಭಟನೆ, ಜಾಥಾಗೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed