Friday, June 20, 2025

Latest Posts

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

- Advertisement -

Political News:

ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ.

ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ  ಆರ್.ಧ್ರುವನಾರಾಯಣ್ ಅವರೇ ಬಹಿರಂಗಪಡಿಸಿದ್ದಾರೆ. ಆದರೆ ಇನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ. http://ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ

ಜ.೨೧ ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಮುಖಂಡರ ದಂಡೇ ಜಿಲ್ಲೆಗೆ ಹರಿದು ಬರಲಿದೆ. ಈ ವೇಳೆ ಕಾಂಗ್ರೆಸ್ ಬಲ ಪ್ರದರ್ಶನ ನಡೆಯಲಿ. ಇದೇ ವೇಳೆ ಸಿದ್ದರಾಮಯ್ಯ ಅವರು ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗದೆ.

ಮತ್ತೊಬ್ಬ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ, ಮಾಜಿ ಸಚಿವ ಎ.ಮಂಜು ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಖಚಿತತೆ ಸಿಗುತ್ತಿಲ್ಲ ಎನ್ನಲಾಗಿದೆ.ರಾಜ್ಯದ ಹಲವು ಭಾಗಗಳಿಂದ ಪ್ರಮುಖರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಧ್ರುವನಾರಾಯಣ್ ತಿಳಿಸಿದ್ದಾರೆ.

ಜ.೨೧ ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿಗಳು ಸೇರಿಗೆ ಪ್ರಮುಖ ನಾಯಕರು ಜಿಲ್ಲೆಗೆ ಆಗಮಿಸಲಿದ್ದಾರೆ. ಈ ಸಮಯದಲ್ಲಿ ಯರ‍್ಯಾರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಅರಕಲಗೂಡು ಕ್ಷೇತ್ರದ ಬಗ್ಗೆ ಇನ್ನೂ ಯಾವುದು ಸ್ಪಷ್ಟವಾಗಿಲ್ಲ.ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇ.ಹೆಚ್.ಲಕ್ಷಣ್ ಅವರು ತಿಳಿಸಿದ್ದಾರೆ.

ಪಕ್ಷಿ ಪ್ರಿಯರಿಗೆ ಹಕ್ಕಿ ಹಬ್ಬ…! ಚಾರಣ ಸ್ಥಳದಲ್ಲಿ 3೦೦ ಪ್ರಭೇದದ ಪಕ್ಷಿಗಳು…!

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ

“ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ”:ಶಾಸಕ ಪ್ರೀತಂಗೌಡ

- Advertisement -

Latest Posts

Don't Miss