Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ.

ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಸ್ಥಳದಲ್ಲಿದ್ದವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೂ ಮನೆಗಳ ಮೇಲೆ ಕಲ್ಲು ತೂರಿ ನಂತರ ಮನೆಗಳ ಮಾಲಿಕರ ಮೇಲೆ ಕಲ್ಲೂ ತೂರಿ ಪರಾರಿಯಾಗಿದ್ದಾರೆ.

ಸಾಕಷ್ಟು ವಾಹನಗಳು ಈ ಗಲಾಟೆಯಲ್ಲಿ ಜಖಂಗೊಂಡಿವೆ. ಸದ್ಯ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ದೊಡ್ಡ ಮಟ್ಟದಲ್ಲಿಆಗಬೇಕಿದ್ದ ಗಲಾಟೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಚನ್ನಬಸವ ಸ್ಥಳ ಪರಿಶೀಲನೆ ನಡೆಸಿ ಅಲ್ಲಿರುವ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಪೌರ ಕಾರ್ವಿುಕರಿಂದ ಬಾಯಿ ಬಡಿದುಕೊಂಡು ಪ್ರತಿಭಟನೆ..!

12 ಗಂಟೆಯಲ್ಲಿ 120 ಕಿಮೀ ನಡೆದು ಎಲ್ಲಮ್ಮನ ಗುಡ್ಡಕ್ಕೆ ಬಂದು ಹರಕೆ ತೀರಿಸಿದವರಿಗೆ ಸನ್ಮಾನ..

ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ

About The Author