Shivamogga News:
ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದುರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ ತಮ್ಮ ಕುದುರೆಗಳನ್ನು ಸುಪರ್ದಿಗೆ ತೆಗೆದುಕೊಳ್ಳಲು ತಿಳಿವಳಿಕೆ ಹೊರಡಿಸಲಾಗಿತ್ತು.ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಕುದುರೆಗಳು ಹಗಲು- ರಾತ್ರಿ ಬಂದು ಮಲಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿವೆ. ಈ ಕುದುರೆಗಳ ಮಾಲೀಕರು ಕೂಡಲೇ 7 ದಿನಗಳೊಳಗೆ ತಮ್ಮ ಕುದುರೆಗಳನ್ನು ಸುಪರ್ದಿಗೆ ಪಡೆಯುಂತೆ ಮಹಾನಗರ ಪಾಲಿಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಸಿಎಂ ಬೊಮ್ಮಾಯಿ ಹುಟ್ಟುಹಬ್ಬದ ಸಂಭ್ರಮ: ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕ..!