Thursday, May 15, 2025

Latest Posts

ನಿನ್ನೆ ಮೊಟ್ಟೆ ಇಂದು ಕಪ್ಪು ಬಟ್ಟೆ..! ಸಿದ್ದುಗೆ ಪ್ರತಿಭಟನಾ ಸ್ವಾಗತ..!

- Advertisement -

Chikkamagaluru news updates:

ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಚಿಕ್ಕಮಗಳೂರಿಗೆ ನಿನ್ನೆ ತೆರಳಿದ್ದು, ಇಂದು ಜಿಲ್ಲಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಅಂಗವಾಗಿ ಮಕ್ಕಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಬಿಗಿ ಭದ್ರತೆ ನಡುವೆಯೂ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯಭೂಮಿಗೆ ಬರುವುದು ಬೇಡ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

 

 

- Advertisement -

Latest Posts

Don't Miss