Sunday, September 8, 2024

Latest Posts

ಚುನಾವಣೆ ಟಿಕೆಟ್ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ

- Advertisement -

Political news:

ಇಂದು ಕಾಂಗ್ರೆಸ್ ಪಕ್ಷದಿಂದ ಸುಮಾರು 124 ಕ್ಷೇತ್ರದಲ್ಲಿ ಟಿಕೆಟ್ ಅನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಹಲವು ನಾಯಕರನ್ನು ಹಾಲಿ ಶಾಸಕರನ್ನು  ಅವರ ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದ ಪ್ರಮುಖ ನಾಯಕರಾಗಿದ್ದಾರೆ.

ಡಿ ಕೆ ಶಿವಕುಮಾರ್ ಎಂದಿನಂತೆ ಕನಕಪುರದಿಂದ ಸ್ಪರ್ಧಿಸುತ್ತಿದ್ದರೆ, ಸಿದ್ದರಾಮಯ್ಯ ಅವರು ಪ್ರಸ್ತುತ ತಮ್ಮ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರಕ್ಕೆ ಮರಳುತ್ತಿದ್ದಾರೆ. 124 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯತೀಂದ್ರ ಅವರ ಹೆಸರು ಬೇರೆ ಕ್ಷೇತ್ರಗಳಲ್ಲಿಯೂ ಪ್ರಕಟವಾಗಿಲ್ಲ.

ಪ್ರಸ್ತುತ ಬಾಗಲಕೋಟೆ ಜಿಲ್ಲೆಯ ಬಾದಾಮಿಯನ್ನು ಪ್ರತಿನಿಧಿಸುತ್ತಿರುವ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದಾಗಿ ಈ ಹಿಂದೆ ಘೋಷಿಸಿದ್ದರು, ಆದರೆ ಪಕ್ಷದ ನಾಯಕತ್ವವು ಅಲ್ಲಿಂದ ಸ್ಪರ್ಧಿಸುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ ನಂತರ ಹಿಂದೆ ಸರಿದರು.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇನ್ನು ಎರಡನೇ ಕ್ಷೇತ್ರ ಆಯ್ಕೆಯ ಬಗ್ಗೆ ಯಾವುದೇ ಸುಳಿವು ನೀಡಿರಲಿಲ್ಲ. ಸಿದ್ದರಾಮಯ್ಯ ಅವರು ಕೋಲಾರ ಮತ್ತು ಬಾದಾಮಿ ಮೇಲೆ ಕಣ್ಣಿಟ್ಟಿರುವ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

- Advertisement -

Latest Posts

Don't Miss