ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..

ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ವಿಜಯಪುರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ರಾಜು ಆಲಗೂರು, ಸಂಗಮೇಶ್ ಎಂಬುವವರು ಈ ವೀಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. … Continue reading ಅಪ್ಪನಿಗೆ ಟಿಕೇಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಮಗ..