ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಜಾರಿಗೊಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪೋಸ್ಟರ್ ಅಭಿಯಾನ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬಜೆಪಿ ನಾಯಕರು ಕಾಂಗ್ರೆಸ್ ದುರುಳರ, ಮೋಸಗಾರರ, ದೇಶವಿರೋಧಿ ನೀತಿಗಳಿರುವ ಪಕ್ಷ ಎಂದು ಟೀಕಿಸಿದರು. ಬಿಜೆಪಿಯು ಸಂವಿಧಾನ ಬದಲಿಸಿದ್ದಾಗಿ ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ ಎಂದರು. ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷವು ದೇಶದ ಜನರ ಮುಂದೆ ಅಪರಾಧಿ ಸ್ಥಾನದಲ್ಲಿ ನಿಂತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ರಾಮಲೀಲಾ ಮೈದಾನಕ್ಕೆ ಬಂದು ದೇಶದ ಮುಂದೆ ತಲೆಬಾಗಿ ನಿಂತು, ದೇಶದ ಜನರ ಮುಂದೆ ತಲೆಬಗ್ಗಿಸಿ, ನಾವು ಸಂವಿಧಾನಕ್ಕೆ ಅಪಚಾರ ಮಾಡಿದ್ದಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದ ಬಿಜೆಪಿ ನಾಯಕರು ನರೇಂದ್ರ ಮೋದಿಯವರು ನಮ್ಮ ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇಂಥ ಸಂವಿಧಾನಕ್ಕೆ ಅಪಚಾರ ಬಗೆದ ಪಾಪಿಗಳು ಕಾಂಗ್ರೆಸ್ಸಿಗರು ಎಂದು ಬಿಜೆಪಿ ನಾಯಕರು ದೂರಿದರು..
ಬಳಿಕ ಕಾಂಗ್ರೆಸ್ ಭವನಕ್ಕೆ ಪೋಸ್ಟರ್ ಅಂಟಿಸುವ ಮೂಲಕ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನ ವಶಕ್ಕೆ ಪಡೆದರು. ಇನ್ನೂ ಈ ಪೋಸ್ಟರ್ ಅಭಿಯಾನ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್, ಶಾಸಕ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ, ಕೇಶವಪ್ರಸಾದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Sonia Gandhi ; ಸೋನಿಯಾ, ರಾಹುಲ್ ಗಾಂಧಿ ಕ್ಷಮೆಗೆ ಬಿಜೆಪಿ ಆಗ್ರಹ
- Advertisement -
- Advertisement -