Saturday, June 14, 2025

Latest Posts

Sports News: ಸಮಾರೋಪದವರೆಗಷ್ಟೇ ನಮ್ಮ ಜವಾಬ್ದಾರಿ ಮುಂದಿನದೆಲ್ಲ ಅವರದೇ.. : ಬಿಸಿಸಿಐ.

- Advertisement -

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಸಂಭ್ರಮಾಚರಣೆಗೂ ಮುನ್ನ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 47 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಐಪಿಎಲ್ ಇತಿಹಾಸದಲ್ಲಿಯೇ ಕರಾಳ ಅಧ್ಯಾಯ ಎನ್ನಲಾಗುತ್ತಿರುವ ಈ ದುರ್ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯ ನಡುವೆಯೇ ಆಡಳಿತ ಹಾಗೂ ವಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ಇನ್ನೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿರುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಂದರೆ ಬಿಸಿಸಿಐಗೆ ಮಾಹಿತಿ ಇದ್ದೆ ಈ ವಿಜಯೋತ್ಸವ ಆಯೋಜನೆ ಮಾಡಲಾಗಿತ್ತಾ..? ಅಥವಾ ಅವರೂ ಇದಕ್ಕೆ ಸಮ್ಮತಿ ಸೂಚಿಸಿದ್ರಾ ಎನ್ನುವ ಅನೇಕ ಪ್ರಶ್ನೆಗಳು ಎದ್ದಿದ್ದವು. ಆದರೆ ಇದೀಗ ಈ ಎಲ್ಲ ಪ್ರಶ್ನೆಗಳಿಗೆ ಬಿಸಿಸಿಐ ಮೌನ ಮುರಿದಿದ್ದು, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವ ಉತ್ತರವನ್ನು ನೀಡಿದೆ.

ಇದಕ್ಕೂ ನಮಗೂ ಸಂಬಂಧಬಿಲ್ಲ, ಅದು ಅವರ ಜವಾಬ್ದಾರಿ..!

ಇನ್ನೂ ಈ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐ, ಬೆಂಗಳೂರಿನಲ್ಲಿ ನಡೆದ ಘಟನೆ ದುರದೃಷ್ಟಕರ; ಪ್ರತಿಯೊಂದು ಜೀವವೂ ಅಮೂಲ್ಯ. ಐಪಿಎಲ್​ ಸಮಾರೋಪ ಸಮಾರಂಭದವರೆಗೆ ಮಾತ್ರ ನಾವು ಜವಾಬ್ದಾರರಾಗಿರುತ್ತೇವೆ. ಇದು ಆರ್​ಸಿಬಿಯ ಕಾರ್ಯಕ್ರಮ ಆಗಿದ್ದರಿಂದ ಬಿಸಿಸಿಐಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದ್ದು, ದುರಂತದ ಚಂಡು ಇದೀಗ ರಾಜ್ಯ ಸರ್ಕಾರ, ರಾಜ್ಯ ಕ್ರಿಕೆಟ್ ಮಂಡಳಿ ಹಾಗೂ ಆರ್​ಸಿಬಿ ಫ್ರಾಂಚೈಸಿ ಅಂಗಳಕ್ಕೆ ಬಂದು ತಲುಪಿದಂತಾಗಿದೆ.

ನನಸಾಗಿತ್ತು 18 ವರ್ಷಗಳ ಟ್ರೋಫಿ ಕನಸಿನ ಸಂಭ್ರಮ ಉಳಿಯಲಿಲ್ಲ ದೀರ್ಘ ಕಾಲ..

ಅಲ್ಲದೆ ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ 2025 ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸುವ ಮೂಲಕ ಆರ್​ಸಿಬಿ 18 ವರ್ಷಗಳ ನಂತರ ಟ್ರೋಫಿಯನ್ನು ಗೆದ್ದುಕೊಂಡಿದೆ.

ಇದಾದ ನಂತರ ಬೆಂಗಳೂರಿನಲ್ಲಿ ಆರ್​​ಸಿಬಿ ವಿಜಯೋತ್ಸವ ಮೆರವಣಿಗೆ ನಡೆಸುವುದಾಗಿ ಘೋಷಿಸಿತು. ಟ್ರಾಫಿಕ್​ ಜಾಮ್​ ಸಮಸ್ಯೆಯಿಂದಾಗಿ ಬೆಂಗಳೂರು ಪೊಲೀಸರು ಈ ಮೆರವಣಿಗೆಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಮೆರವಣಿಗೆ ಬದಲಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಿತ್ತು. ಈ ವೇಳೆ ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮೈದಾನದ ಬಳಿ ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ದುರ್ಘಟನೆಯಿಂದ ಸಂಭ್ರಮದಲ್ಲಿದ್ದವರ ಸಂತಸ ದೀರ್ಘಕಾಲ ಉಳಿಯಲಿಲ್ಲ ಎನ್ನುವುದು ನಿಜಕ್ಕೂ ಶೋಚನೀಯ.

ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ದಾಖಲಾಯ್ತು ಸೋಮೋಟೊ ಕೇಸ್..

ಸಂಭ್ರಮದ ಮಧ್ಯೆಯೇ ಈ ಘಟನೆಯಿಂದ ದೇಶಾದ್ಯಂತ ಸೂತಕದ ಛಾಯೆ ಆವರಿಸಿದ್ದು, ಎಲ್ಲೆಡೆ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಇನ್ನೊಂದೆಡೆ ಈ ಘಟನೆಯ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡರೇ, ಇನ್ನೊಂದೆಡೆ ಕಬ್ಬನ್ ಪಾರ್ಕ್ ಪೊಲೀಸರು ಆರ್​ಸಿಬಿ ಫ್ರಾಂಚೈಸಿ ಹಾಗೂ ಕೆಎಸ್​ಸಿಎ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಬಿಎನ್​ಎಸ್​ ಕಾಯಿದೆಯ ಸೆಕ್ಷನ್ 195ರ ಅಡಿಯಲ್ಲಿ ನಿರ್ಲಕ್ಷ್ಯದ ಆರೋಪದ ಮೇಲೆ ಕೇಸ್ ದಾಖಲಾಗಿದೆ.

- Advertisement -

Latest Posts

Don't Miss