ಚಳ್ಳಕೆರೆ: ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ಬಿ ಎಂ ಜಿ ಎಚ್ ಎಸ್ ಶಾಲಾ ಆವರಣದಲ್ಲಿ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟವದ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ಸ್ವೀಕರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು. ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು, ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು.
ತಾಲೂಕಿನ ಅಶ್ವಿನಿ ಎಂಬ ಕ್ರೀಡಾಪಟು ಕಳೆದ ವರ್ಷ 600 ಮೀಟರ್ ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ್ದರು. ಅಶ್ವಿನಿ ಮತ್ತು ಶ್ವೇತಾ ಎಂಬ ಕ್ರೀಡಾಪಟುಗಳು ಹ್ಯಾಂಡ್ ವಾಲ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದರು. ಸೊಬೇಸ್ಟರ್ ಕ್ಯಾಂಪ್ ಎಂಬ ವಿಭಾಗದಲ್ಲಿ ಸೃಷ್ಟಿ ಮತ್ತು ಸ್ಪಂದನ ಎಂಬ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಒಂದು ಲಕ್ಷ ವಿದ್ಯಾರ್ಥಿ ವೇತನವನ್ನು ಪಡೆಯುತ್ತಿದ್ದಾರೆ.
Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ
Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!
Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ