Sunday, September 8, 2024

Latest Posts

Sreesanth: ರಿಯಾನ್ ಪರಾಗ್ ವಿರುದ್ಧ ಶ್ರೀಶಾಂತ್ ಕೆಂಡಾಮಂಡಲ!

- Advertisement -

ಭಾರತ ತಂಡ ಈಗಾಗಲೇ 2ನೇ ಬಾರಿಗೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಸವಾಲನ್ನು ಎದುರಿಸಲಿದೆ. ಶುಭಮನ್‌ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಹೊರಟಿದೆ. ಜುಲೈ 6 ರಿಂದ ಈ ಸರಣಿ ಆರಂಭವಾಗಲಿದೆ. ಹಲವು ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದ್ದು ಹಿರಿಯ ಹಾಗೂ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರಿಯಾನ್ ಪರಾಗ್ ಕೂಡ ಜಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. ಆದರೆ ವಿಶ್ವಕಪ್ ಗೆಲುವಿನ ಬೆನ್ನಲ್ಲೆ ಭಾರತದ ಮಾಜಿ ಆಟಗಾರ ಹಾಗೂ 2007ರ ಟಿ-20 ವಿಶ್ವಕಪ್ ವಿಜೇತ ತಂಡದ ಸದಸ್ಯ ರಿಯಾನ್ ಪರಾಗ್ ಬಗ್ಗೆ ಶ್ರೀಶಾಂತ್ ಆಕ್ರೋಶ ಹೊರಹಾಕಿದ್ದಾರೆ.

ರಿಯಾನ್ ಪರಾಗ್ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಈ ಬಾರಿಯ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಭಾರತ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಪಡೆಯುವಲ್ಲಿ ಸಫಲರಾಗಿದ್ದಾರೆ. ಪರಾಗ್ ಈ ಮೂಲಕ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಮಿಂಚುವ ವಿಶ್ವಾಸದಲ್ಲಿದ್ದಾರೆ. ಆದರೆ ಈ ನಡವೆಯೇ ಶ್ರೀಶಾಂತ್ ಪರಾಗ್ ವಿರುದ್ಧ ಕೋಪಗೊಂಡಿದ್ದಾರೆ. ಭಾರತ ತಂಡದಲ್ಲಿ ಆಡುವ ಮುನ್ನ ದೇಶಾಭಿಮಾನವನ್ನು ಬೆಳೆಸಿಕೊಳ್ಳಿ ಎಂದು ಪರಾಗ್‌ಗೆ ಶ್ರೀಶಾಂತ್ ಬುದ್ಧಿವಾದ ಹೇಳಿದ್ದಾರೆ. ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಆಡಿದ ಪಂದ್ಯಗಳನ್ನು ವೀಕ್ಷಿಸಿಲ್ಲ ಎಂದು ಕೆಲವರು ಹೇಳುತ್ತಾರೆ. ತಂಡಕ್ಕೆ ಆಯ್ಕೆಯಾಗಿಲ್ಲವೆಂದು ಭಾರತ ತಂಡದ ಪಂದ್ಯಗಳನ್ನು ವೀಕ್ಷಿಸುವುದಿಲ್ಲ ಎಂದು ಹೇಳುತ್ತಾರೆ, ಇದು ಎಷ್ಟರ ಮಟ್ಟಿಗೆ ಸರಿ? ಟೀಂ ಇಂಡಿಯಾ ಆಡುವ ಪಂದ್ಯಗಳನ್ನು ವೀಕ್ಷಿಸಲು ಸಾದ್ಯವಾಗದವರು ದೇಶವನ್ನು ಪ್ರತಿನಿಧಿಸಲು ಅರ್ಹರೇ ಎಂದು ಶ್ರೀಶಾಂತ್ ಪ್ರಶ್ನಿಸಿದ್ದಾರೆ.

ಇತ್ತೀಚೆಗಷ್ಟೇ ಫಾಡ್‌ಕಾಸ್ಟ್ ಶೋವೊಂದರಲ್ಲಿ ಭಾಗವಹಿಸಿದ್ದ ರಿಯಾನ್ ಪರಾಗ್ , ಭಾರತ ತಂಡ ಆಡುವ ಟಿ-20 ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಕೋಪಗೊಂಡ ಶ್ರೀಶಾಂತ್ ರಿಯಾನ್ ಪರಾಗ್ ಅವರಿಗೆ ದೇಶಭಕ್ತಿಯ ಪಾಠ ಮಾಡಿದ್ದಾರೆ.

- Advertisement -

Latest Posts

Don't Miss