Wednesday, July 9, 2025

Latest Posts

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಕಾರ್ಯಕ್ರಮ ನಡೆಸಲು ಅಷ್ಟು ಆತುರ ಏನಿತ್ತು ಎಂದು ಪ್ರಶ್ನಿಸಿದ ಜೆಡಿಎಸ್

- Advertisement -

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ“ಂಡಿದ್ದಾರೆ.

ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು Tweet ಇಂತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ಅತ್ಯಂತ ದುಃಖ ತಂದಿದೆ. ಈ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದೇ ಈ ದುರಂತಕ್ಕೆ ಕಾರಣ. ಸೂಕ್ತ ಭದ್ರತೆ ಕೈಗೊಳ್ಳುವಲ್ಲಿ ಸಂಪೂರ್ಣವಾಗಿ ವೈಫಲ್ಯ ಅನುಭವಿಸಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ಅವರ ಪ್ರಚಾರ ಹಾಗೂ ಕ್ರೆಡಿಟ್ ತೆಗೆದುಕೊಳ್ಳುವ ಹಪಾಹಪಿಗೆ ಅಮಾಯಕರು ಪ್ರಾಣ ಕಳೆದುಕೊಳ್ಳುವಂತೆ ಆಗಿರುವುದು ದುರದೃಷ್ಟಕರ. ಮೃತರಿಗೆ ನಮ್ಮ ತೀವ್ರ ಸಂತಾಪಗಳು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸಂತಾಪಗಳು ಮತ್ತು ಸಾಂತ್ವನಗಳಿಂದ ಕಳೆದುಹೋದ 11 ಜೀವಗಳು ಮರಳಿ ಬರುವುದಿಲ್ಲ. ಈ ದುರಂತ ಘಟನೆಗೆ ನೀವೇ ನೇರ ಹೊಣೆ. ನಿಮ್ಮ ಅಸಮರ್ಥತೆ ಮತ್ತು ನಿರ್ಲಕ್ಷ್ಯ ಸಾಬೀತಾಗಿದೆ. ಅಮಾಯಕರ ಸಾವಿಗೆ ನ್ಯಾಯ ಸಿಗಬೇಕಾದರೆ ಮೊದಲು ನೀವು ಬೆಂಗಳೂರು ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಕೊಡಿ. ಕಾಂಗ್ರೆಸ್ಸೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ದುರ್ಘಟನೆಗಳಾದ ಸಂದರ್ಭದಲ್ಲಿ ಅಲ್ಲಿನ ಸಿಎಂ ಮತ್ತು ಸಚಿವರುಗಳ ರಾಜೀನಾಮೆಗೆ ಆಗ್ರಹಿಸುವ ನೀವು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರಂತ ಘಟನೆಯ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ #RCB ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ ಆರ್ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋ ಶೂಟ್ ಶೋಕಿಗೆ ಮುಗ್ದರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ. ವಿಧಾನಸೌಧ ಮುಂದೆಯೇ ಸರ್ಕಾರದ ಆಡಳಿತ ಯಂತ್ರ ಬೀಡು ಬಿಟ್ಟಿತ್ತು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ಕಾಲ್ತುಳಿತ ದುರಂತದಲ್ಲಿ 11 ಜ‌ನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆಹೊರಬೇಕು.

ಕಾಂಗ್ರೆಸ್ ಸರ್ಕಾರದ ಹುಚ್ಚು ಪ್ರಚಾರ ಪಡೆಯುವ ಗೀಳು 11ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದೆ. ಅಧಿಕಾರದ ಅಮಲಿನಲ್ಲಿರುವ ಪ್ರಚಾರಪ್ರಿಯ, ಜಾಹೀರಾತು ಪ್ರಿಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಲ್ಲಿ ರಾರಾಜಿಸಲು ಹೋಗಿ ಮುಗ್ಧ ಜನರ ಜೀವದ ಜೊತೆ ಚಲ್ಲಾಟವಾಡಿದೆ. ವಿಜಯದ ಪರೇಡ್‌ಗಳನ್ನು ಆಚರಿಸುವ ಸಮಯದಲ್ಲಿ ಸರಿಯಾದ ನಾಗರಿಕರ ಸುರಕ್ಷತಾ ಕ್ರಮಗಳನ್ನು , ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜನಸಂದಣಿ ನಿರ್ವಹಣೆಯೊಂದಿಗೆ ಯೋಜಿಸಬೇಕು, ರಾಜಕೀಯ ಲಾಭಕ್ಕಾಗಿ ಆತುರಪಡಬಾರದು ಎಂಬುದಕ್ಕೆ ಕಾಲ್ತುಳಿತ ದುರಂತವೇ ಸಾಕ್ಷಿ.
  • ಕೆಕೆಆರ್ 2 ದಿನಗಳ ನಂತರ ಕೊಲ್ಕತ್ತಾದಲ್ಲಿ ವಿಜಯ ಪರೇಡ್ ನಡೆಸಿತು
  • ಮುಂಬೈ 2 ದಿನಗಳ ಬಳಿಕ ವಿಜಯೋತ್ಸವ ಮೆರವಣಿಗೆ ಆಯೋಜಿಸಿತು
  • ಸಿಎಸ್‌ಕೆ 3 ದಿನಗಳ ನಂತರ ವಿಜಯದ ಪರೇಡ್ ನಡೆಸಿತು
  • ಭಾರತ ತಂಡ 5 ದಿನಗಳ ನಂತರ ತಮ್ಮ ಟಿ -20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ನಡೆಸಿತು
ಲಕ್ಷಾಂತರ ಜನ ಸೇರುವ ಕ್ರೀಡಾಂಗಣದ ಬಳಿ ಆಗಿರುವ ಭದ್ರತಾ ಲೋಪಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ. ಸಿಎಂ
ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಸಚಿವರು ನೈತಿಕ ಹೊಣೆಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
https://youtu.be/W-vkVcDoWk0
- Advertisement -

Latest Posts

Don't Miss