Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.
ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ. ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪ್ಲೋಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ ಉದ್ಯೋಗ ದೊರೆಯದೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ವಾಸವಿರುವವರು, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರಿಗೆ ಈ ಯೋಜನೆ ಅನ್ವಯವಾಗಲಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇಂದಿನಿಂದ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಇಂದಿನಿಂದ 5ನೇ ಗ್ಯಾರಂಟಿ ಜಾರಿ.. ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಸರ್ಕಾರದ ಹೊಣೆ ಎಂದಿದೆ.
ಇಂದಿನಿಂದ 5ನೇ ಗ್ಯಾರಂಟಿ ಜಾರಿ..
ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಯುವನಿಧಿ" ಯೋಜನೆಯ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ.
ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು…
— Karnataka Congress (@INCKarnataka) December 26, 2023
2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ.
ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪ್ಲೋಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ… pic.twitter.com/WG8c5l0RjX
— Siddaramaiah (@siddaramaiah) December 26, 2023
ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಶಿಕ್ಷಣ ಮುಗಿದಂತೆ ಜೀವನ ನಿರ್ವಹಣೆಗೆ ಉದ್ಯೋಗ ಕಂಡುಕೊಳ್ಳಲೇಬೇಕದ ಒತ್ತಡವು ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಕಂಡುಕೊಳ್ಳಲು ತಡೆಯಾಗಿದೆ. ಇದನ್ನು ಮನಗಂಡು ರಾಜ್ಯಸರ್ಕಾರವು ಯುವಜನತೆ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾದವರಿಗೆ ಉದ್ಯೋಗ ಕಂಡುಕೊಳ್ಳುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ಸಹಾಯಧನವನ್ನು… pic.twitter.com/V9KJ7mbRlr
— DIPR Karnataka (@KarnatakaVarthe) December 26, 2023
ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ "ಯುವನಿಧಿ" ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ.
ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ… pic.twitter.com/kctbijrMax
— Siddaramaiah (@siddaramaiah) December 26, 2023




