Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಸಾಕಷ್ಟು ವೈಫಲ್ಯವಾಗಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಸುಧಾರಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ವಿಫಲವಾಗಿದ್ದು, ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಸಿಎಂ ಬರಬೇಕು ಎಂದು ಅವರು ಹೇಳಿದರು.
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ. ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್ಕೌಂಟರ್ ಆಗಬೇಕು. ಪೊಲೀಸರಿಗೆ ಆಯುಧ ಕೊಟ್ಟಿರುವುದು ಏಕೆ..? ತುಕ್ಕು ಹಿಡಿಸುವುದಕ್ಕಾ..? ಏನಕೌಂಟರ್ ಮಾಡಿ ಎಂದು ನಿರಂಜನ್ ಒತ್ತಾಯಿಸಿದರು.
Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್ಪೆಕ್ಟರ್, ಮಹಿಳಾ ಪೇದೆ ಅಮಾನತು
ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .
ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್