National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು.
ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.
ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಇಲ್ಲಿದೆ ಕಂಪ್ಲೀಟ್ ವೀಡಿಯೋ……………….
Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!