Friday, October 18, 2024

Latest Posts

BIG NEWS: ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ

- Advertisement -

ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ.

ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ ಮಾಡಿದ್ದಾರೆ ಎಂದು ತಿಳಿಸಿದೆ.

ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಹಾಗೂ ವಿಜಯ್‌ ಶರ್ಮಾರವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಸಂಚಿತ್‌ ಸಹಾನಿಯವರು ರಾಜ್ಯ ಪ್ರಧಾನ ಕಾರ್ಯದರ್ಶಿ, ಹರಿಹರನ್‌ರವರು ರಾಜ್ಯ ಖಜಾಂಚಿ, ಜಗದೀಶ್ ವಿ ಸದಂ ರಾಜ್ಯ ಮಾಧ್ಯಮ ಉಸ್ತುವಾರಿಗಳಾಗಿ , ಕೆ. ಮಥಾಯ್ ರಾಜ್ಯವಕ್ತಾರ ಹುದ್ದೆಗೆ ನೇಮಕ ಮಾಡಿದೆ. ರಾಜ್ಯ ಕಾರ್ಯದರ್ಶಿಗಳಾಗಿ ಎಚ್.ಡಿ.ಬಸವರಾಜು, ಡಾ. ವೆಂಕಟೇಶ್‌, ಬಿ.ಟಿ.ನಾಗಣ್ಣ, ಲಕ್ಷ್ಮೀಕಾಂತ್‌ ರಾವ್‌, ಶಾಂತಲಾ ದಾಮ್ಲೆ ನೇಮಕಗೊಂಡಿದ್ದಾರೆ. ರಾಜ್ಯ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ದರ್ಶನ್‌ ಜೈನ್‌ ಹಾಗೂ ವಿವೇಕಾನಂದ ಸಾಲಿನ್ಸ್‌ರವನ್ನು ನೇಮಿಸಿದೆ.

ಇನ್ನೂಬೆಂಗಳೂರು ಎಎಪಿ ಅಧ್ಯಕ್ಷರನ್ನಾಗಿ ಮೋಹನ್ ದಾಸರಿ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ, ಕಾರ್ಯದರ್ಶಿಯಾಗಿ ಸೀತಾರಾಂ ಗುಂಡಪ್ಪ ಸೇರಿದಂತೆ 8 ಮಂದಿಯನ್ನು ನೇಮಕ ಮಾಡಿದೆ.

 

- Advertisement -

Latest Posts

Don't Miss